ಸೋಮವಾರ, ಏಪ್ರಿಲ್ 28, 2025
HomepoliticsModi - Madhwaraj : ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆಅಭಿನಂದಿಸಿ ಪ್ರಮೋದ್‌ ಮಧ್ವರಾಜ್‌

Modi – Madhwaraj : ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆಅಭಿನಂದಿಸಿ ಪ್ರಮೋದ್‌ ಮಧ್ವರಾಜ್‌

- Advertisement -

ಉಡುಪಿ : ದೇಶದಲ್ಲಿ ಜಾರಿಗೆ ತರಲು ಹೊರಟಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಾಸ್‌ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಇದರೊಂದು ಐತಿಹಾಸಿಕ ನಿರ್ಧಾರ ಎನ್ನುವ ಮೂಲಕ ಮೋದಿ ಅವರ ಗುಣಗಾನ ಮಾಡಿದ್ದಾರೆ.

ವಿಶ್ವೇಶ್ವರ ತೀರ್ಥ ಶ್ರೀಪಾದರಿಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಂಡಾಡಿದ್ದ ಪ್ರಮೋದ್‌ ಮಧ್ವರಾಜ್‌ ಅವರು, ಇದೀಗ ಕೃಷಿ ಕಾಯ್ದೆಯನ್ನು ಪ್ರಧಾನಿ ಮೋದಿ ಅವರು ವಾಪಾಸ್‌ ಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ಟ್ವೀಟ್‌ ಮಾಡಿದ್ದಾರೆ. ರೈತರ ಬೇಡಿಕೆಯಂತೆ 3 ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿರುವ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ನಾನು ದಾಖಲೆಯಲ್ಲಿ ನನ್ನ ಮೆಚ್ಚುಗೆಯನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ಮುಖಂಡ ಪ್ರಮೋದ್‌ ಮಧ್ವರಾಜ್‌ ಅವರು ಈ ಹಿಂದೆ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರಮೋದ್‌ ಮಧ್ವರಾಜ್‌ ಅವರು ಬಿಜೆಪಿಗೆ ಬರುವುದಾದ್ರೆ ಸ್ವಾಗತ ಕೋರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಪ್ರಮೋದ್‌ ಮಧ್ವರಾಜ್‌ ಅವರು ಮತ್ತೆ ಪ್ರಧಾನಿಯವರನ್ನು ಹೊಗಳುವ ಕಾರ್ಯವನ್ನು ಮಾಡಿದ್ದಾರೆ.

( Congress leader Pramod Madhwaraj congratulates Prime Minister Narendra Modi )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular