Shobha Karandlaje’s outrage : ‘ನಾನು ಶೋಭಾ ಗೌಡ ಅಲ್ಲ ಕರಂದ್ಲಾಜೆ, ಮಿಥುನ್​ ರೈ ಒಬ್ಬ ಚಿಲ್ಲರೆ ಮನುಷ್ಯ’ : ಶೋಭಾ ಕರಂದ್ಲಾಜೆ ಸಿಡಿಮಿಡಿ

ಉಡುಪಿ : Shobha Karandlaje’s outrage : ರಾಜ್ಯದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಅನೇಕ ಚರ್ಚೆಗಳ ಬಗ್ಗೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಖಡಕ್​ ಉತ್ತರವನ್ನು ನೀಡಿದ್ದಾರೆ. ಶೋಭಾ ಕರಂದ್ಲಾಜೆ ಹೆಸರನ್ನು ಬದಲಾಯಿಸಿ ಶೋಭಾ ಗೌಡ ಎಂದು ಮಾಡಿಕೊಂಡಿದ್ದಾರೆ ಎಂಬ ವದಂತಿ ವಿಚಾರವಾಗಿ ಉಡುಪಿಯಲ್ಲಿ ಸ್ಪಷ್ಟೀಕರಣ ನೀಡಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ . ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡ್ತಿದ್ದಾರೆ. ರಾಜಕಾರಣಿಗಳನ್ನು ಕೆಲವರು ಜೋಕರ್​ ಅಂತಾ ಭಾವಿಸುತ್ತಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯದಲ್ಲಿ ಯಾಕೆ ಈ ಚರ್ಚೆ ಶುರುವಾಯ್ತು ಅನ್ನೋದು ನನಗೆ ಗೊತ್ತಿಲ್ಲ. ಆದರೆ ನನ್ನದೊಂದು ವಿನಂತಿ, ದಯವಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಅಪಪ್ರಚಾರ ಮಾಡುವುದನ್ನು ಮೊದಲು ನಿಲ್ಲಿಸಿ. ಹೆಸರು ಬದಲಾಯಿಸಿಕೊಳ್ಳೋಕೆ ನನಗೇನು ತಲೆಕೆಟ್ಟಿದ್ಯಾ..? ಎಂದು ಪ್ರಶ್ನೆ ಮಾಡಿದ್ದಾರೆ .

ಗಂಗೊಳ್ಳಿಯಲ್ಲಿ ಮೀನುಗಾರಿಕಾ ಜೆಟ್ಟಿ ಕುಸಿದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಕಳಪೆ ಕಾಮಗಾರಿ ನಡೆದಿದ್ದರೆ ತಕ್ಷಣ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಟ್ಟಿ ನಿರ್ಮಾಣ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಈ ನಿರ್ಮಾಣ ಸಂಸ್ಥೆಗೆ ಮುಂದೆ ಯಾವುದೇ ಕೆಲಸ ಮಾಡಲು ಅವಕಾಶ ನೀಡಬಾರದು. ಈ ಕಾಮಗಾರಿ ಬಗ್ಗೆ ತನಿಖೆ ಮಾಡಿ, ಠೇವಣಿ ಇಟ್ಟಿದ್ದರೆ ಮುಟ್ಟುಗೋಲು ಹಾಕಿ ಎಂದು ಖಡಕ್​ ಸೂಚನೆ ನೀಡಿದ್ದಾರೆ.

ಇನ್ನು ಇದೇ ವೇಳೆ ಶೋಭಾ ಕರಂದ್ಲಾಜೆ ಫೋಟೋ ತೆಗೆದವರಿಗೆ 5000 ಸಾವಿರ ರೂಪಾಯಿ ಬಹುಮಾನ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್​ ನಾಯಕ ಮಿಥುನ್​ ರೈಗೆ ತಿರುಗೇಟು ನೀಡಿದ ಅವರು, ಬರಲಿ ಎಲ್ಲರೂ ಸೆಲ್ಫಿ ತೆಗೆಯಲು ಬರಲಿ, ಆ ಮಿಥುನ್​ ರೈ ಮೊದಲು ಬರಲಿ. ಅವನೊಬ್ಬ ಚಿಲ್ಲರೆ ಮನುಷ್ಯ, ಅವನ ಹೇಳಿಕೆಗಳಿಗೆ ತಿರುಗೇಟು ನೀಡಿ ನಾನೇಕೆ ಅವನನ್ನು ದೊಡ್ಡ ಮನುಷ್ಯನನ್ನಾಗಿ ಮಾಡಲಿ ಎಂದು ಟಾಂಗ್​ ನೀಡಿದ್ದಾರೆ.

ಇದನ್ನು ಓದಿ : CM Ibrahim :‘ಹಾಳೂರಿಗೆ ಉಳಿದೋನೇ ಗೌಡ’:ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಗ್ಗೆ ಸಿಎಂ ಇಬ್ರಾಹಿಂ ವ್ಯಂಗ್ಯ

ಇದನ್ನೂ ಓದಿ : CM Bommai hits back : ‘ಆರ್​ಎಸ್​ಎಸ್​ ಬ್ಯಾನ್​ ಮಾಡಿ ಎನ್ನುವವರು ಮೂರ್ಖರು’ : ಸಿಎಂ ಬೊಮ್ಮಾಯಿ ತಿರುಗೇಟು

Union Minister Shobha Karandlaje’s outrage against Congress leader Mithun Rai

Comments are closed.