ಮುಂದಿನ 3 ವರ್ಷ ಯಡಿಯೂರಪ್ಪನವರೇ ಸಿಎಂ : ಡಿಸಿಎಂ ಲಕ್ಷ್ಮಣ ಸವದಿ

0

ನವದೆಹಲಿ : ಯಡಿಯೂರಪ್ಪನವರೇ ನಮ್ಮ ನಾಯಕರು. ಮುಂದಿನ ಮೂರು ವರ್ಷಗಳ ಕಾಲವೂ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಸವದಿ ಡಿಸಿಎಂ ಸವದಿ ಸ್ಪಷ್ಟನೆಯನ್ನು ನೀಡಿದ್ದಾರೆ. ನಾನು ನನ್ನ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ. ಕೊರೊನಾ ಕಾರಣಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ. ನಂತರ ದೆಹಲಿಗೆ ಬಂದಿರುವುದು ಕಾಕತಾಳೀಯ ಅಷ್ಟೆ. ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದಿದ್ದಾರೆ.

ರಾಜ್ಯ ಸರಕಾರಕ್ಕೆ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಅವರಿಗೆ ಸಿಹಿ ತಿನ್ನಿಸಿ ಬಂದಿದ್ದೇನೆ. ಅಲ್ಲದೇ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನೂ ಭೇಟಿ ಮಾಡಿದ್ದೇನೆ. ಆದರೆ ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಚರ್ಚೆಯನ್ನೂ ಮಾಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವ ಸುದ್ದಿ ನಿಜವಲ್ಲ. ಯಡಿಯೂರಪ್ಪ ಅವರನ್ನು ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಬದಲಾವಣೆ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.