ಭಾನುವಾರ, ಏಪ್ರಿಲ್ 27, 2025
HomeSpecial Storyಅಘೋರೇಶ್ವರನಿಗೆ ಬ್ರಹ್ಮಕಲಶೋತ್ಸವ : ಮೇಲ್ಚಾವಣೆ ರಚನಾ ಮುಹೂರ್ತ, ಅಮಂತ್ರಣ ಪತ್ರಿಕೆ ಬಿಡುಗಡೆ

ಅಘೋರೇಶ್ವರನಿಗೆ ಬ್ರಹ್ಮಕಲಶೋತ್ಸವ : ಮೇಲ್ಚಾವಣೆ ರಚನಾ ಮುಹೂರ್ತ, ಅಮಂತ್ರಣ ಪತ್ರಿಕೆ ಬಿಡುಗಡೆ

- Advertisement -

ಕೋಟ : ಚಿತ್ರಪಾಡಿ – ಕಾರ್ತಟ್ಟಿನಲ್ಲಿರುವ ಅಘೋರೇಶ್ವರನ ಸನ್ನಿಧಿಯಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ ಎಪ್ರಿಲ್ 6 ರಿಂದ 09ರ ವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮಕಲಶೋತ್ಸವದ ಅಮಂತ್ರಣ ಪತ್ರ ಬಿಡುಗಡೆ ಹಾಗೂ ಮೇಲ್ಚಾವಣೆ ರಚನಾ ಮಹೂರ್ತ ನಡೆಯಿತು.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿಯ ಪ್ರವರ್ತಕರಾಗಿರೋ ನಾಡೋಜ ಡಾ.ಜಿ.ಶಂಕರ್ ಅವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ರಚನಾ ಮುಹೂರ್ತವನ್ನು ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕಿದಿಯೂರು ಉದಯ್ ಕುಮಾರ್ ಶೆಟ್ಟಿ ಶುಭಹಾರೈಸಿದರು.

ಕೋಟಿ ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ಜಿ. ತಿಮ್ಮ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರು , ನಿವೃತ್ತ ಇಂಜಿನಿಯರ್ ಮಂಜುನಾಥ್ ನಾಯರಿ, ಕೋಶಾಧಿಕಾರಿ ಪ್ರಕಾಶ್ ಮಧ್ಯಸ್ಥ, ಅಘೋರೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಚಂದ್ರಶೇಖರ ಕಾರಂತ ಮುಂತಾದವರು ಉಪಸ್ಥಿತರಿದ್ದರು.

ಬಾಲಕೃಷ್ಣ ನಕ್ಷತ್ರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದ್ರು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿರೋ ಉಮೇಶ್ ನಾಯರಿ ಅವರು ಸ್ವಾಗತಿಸಿ, ಬ್ರಹ್ಮಕಲಶೋತ್ಸವ ಸಮಿತಿಯ ಜೊತೆ ಕಾರ್ಯದರ್ಶಿ ನಾಗರಾಜ್ ಐತಾಳ್ ಧನ್ಯವಾದ ಸಮರ್ಪಿಸಿದರು. ಅಘೋರೇಶ್ವರ ದೇವಸ್ಥಾನದ ಕಾರ್ಯದರ್ಶಿ ಶ್ಯಾಮಸುಂದರ ನಾಯರಿ ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಕಲಶೋತ್ಸವದಲ್ಲಿ ಸಹಕರಿಸುವ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲಾಯಿತು.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular