ಪತ್ನಿ ಸಮೇತ ಮಹಾಕಾಳೇಶ್ವರನ ದರ್ಶನ ಪಡೆದ ರಾಹುಲ್, ಕನ್ನಡಿಗನಿಗೆ ಸಿಗಲಿದ್ಯಾ ಶಿವಾನುಗ್ರಹ?

ಉಜ್ಜಯಿನಿ: ಕಳಪೆ ಫಾರ್ಮ್ ಹಿನ್ನೆಲೆಯಲ್ಲಿ ಭಾರತ ಟೆಸ್ಟ್ ತಂಡದಲ್ಲಿ ಉಪನಾಯಕನ ಸ್ಥಾನ ಕಳೆದುಕೊಂಡಿರುವ ಕನ್ನಡಿಗ ಕೆ.ಎಲ್ ರಾಹುಲ್, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಇತಿಹಾಸ ಪ್ರಸಿದ್ಧ ಮಹಾಕಾಳೇಶ್ವರ ದೇವರ ದರ್ಶನ (KL Rahul Athiya Shetty visits Ujjain’s Mahakaleshwar temple) ಪಡೆದಿದ್ದಾರೆ.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ (India Vs Australia Border-Gavaskar test series) 3ನೇ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಮಧ್ಯಪ್ರದೇಶದ ಇಂದೋರ್’ನಲ್ಲಿ ಬೀಡು ಬಿಟ್ಟಿದೆ. ಭಾನುವಾರ ಅಭ್ಯಾಸ ಮುಗಿಸಿದ ನಂತರ ಪತ್ನಿ ಆತಿಯಾ ಶೆಟ್ಟಿ ಜೊತೆ ಉಜ್ಜಯಿನಿಗೆ ತೆರಳಿದ ರಾಹುಲ್, ಮಹಾಕಾಳೇಶ್ವರನ ದರ್ಶನ ಪಡೆದರು (KL Rahul and Athiya Shetty visits Ujjain’s Mahakaleshwar temple). ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ರಾಹುಲ್, ಯಶಸ್ಸಿಗಾಗಿ ಪ್ರಾರ್ಥಿಸಿದರು. ರಾಹುಲ್ ಮತ್ತು ಆತಿಯಾ ಶೆಟ್ಟಿ ವಿವಾಹ ಕಳೆದ ತಿಂಗಳು 23ರಂದು ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಖಂಡಾಲದಲ್ಲಿ ನಡೆದಿತ್ತು.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಕೆ.ಎಲ್ ರಾಹುಲ್ (KL Rahul) ಮುಗ್ಗರಿಸಿದ್ದಾರೆ. ಆಸೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಆಡಿರುವ 3 ಇನ್ನಿಂಗ್ಸ್’ಗಳಿಂದ ರಾಹುಲ್ ಕೇವಲ 38 ರನ್ (20, 1, 17) ಗಳಿಸಿದ್ದಾರೆ. ವೈಫಲ್ಯದ ನಡುವೆಯೂ ರಾಹುಲ್ ಅವರ ಸಾಮರ್ಥ್ಯದ ಮೇಲೆ ಟೀಮ್ ಮ್ಯಾನೇಜ್ಮೆಂಟ್ ನಂಬಿಕೆಯಿಟ್ಟಿದ್ದು ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗೆ ಕನ್ನಡಿಗನನ್ನು ತಂಡದಲ್ಲಿ ಉಳಿಸಿಕೊಂಡಿದೆ. ಆದರೆ ಉಪನಾಯಕನ ಪಟ್ಟದಿಂದ ರಾಹುಲ್ ಅವರನ್ನು ಕೆಳಗಿಳಿಸಲಾಗಿದೆ.

ಇದನ್ನೂ ಓದಿ : Mayank Agarwal to lead Rest of India : ಇರಾನಿ ಕಪ್ ಪಂದ್ಯಕ್ಕೆ ರೆಸ್ಟ್ ಆಫ್ ಇಂಡಿಯಾ ತಂಡ ಪ್ರಕಟ, ಕನ್ನಡಿಗ ಮಯಾಂಕ್ ಅಗರ್ವಾಲ್ ನಾಯಕ

ಇದನ್ನೂ ಓದಿ : Jasprit Bumrah IPL 2023 : ಜಸ್ಪ್ರೀತ್ ಬುಮ್ರಾ ಐಪಿಎಲ್ 2023ರಲ್ಲಿ ಆಡುವುದು ಅನುಮಾನ !

ಇದನ್ನೂ ಓದಿ : Sourav Ganguly biopic : ಸೌರವ್ ಗಂಗೂಲಿ ಬಯೋಪಿಕ್ ಸಿನಿಮಾಕ್ಕೆ ಹೀರೋ ಸಿಕ್ಕಾಯ್ತು : ಶೀಘ್ರದಲ್ಲೇ ಸಿನಿಮಾ ಘೋಷಣೆ

ಇದು 3ನೇ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಆಡುವ ಬಳಗದಲ್ಲಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬುದರ ಸ್ಪಷ್ಟ ಸೂಚನೆ. ಕಳೆದ ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ರಾಹುಲ್ ವೈಫಲ್ಯ ಎದುರಿಸಿದ್ದರು.ಭಾರತ ಮತ್ತು ಆಸೀಸ್ ನಡುವಿನ 3ನೇ ಟೆಸ್ಟ್ ಪಂದ್ಯ ಮಾರ್ಚ್ 1ರಂದು ಮಧ್ಯಪ್ರದೇಶದ ಇಂದೋರ್’ನಲ್ಲಿರುವ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ. ನಾಗ್ಪುರ ಮತ್ತು ದೆಹಲಿಯಲ್ಲಿ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಸುಲಭವಾಗಿ ಗೆದ್ದಿರುವ ಟೀಮ್ ಇಂಡಿಯಾ, ಈಗಾಗಲೇ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆಯಲ್ಲಿದೆ.

KL Rahul Athiya Shetty visits Ujjain’s Mahakaleshwar temple : Did Rahul, who visited Mahakaleshwar along with his wife, get Shivanugraha for Kannadigas?

Comments are closed.