ಭಾನುವಾರ, ಏಪ್ರಿಲ್ 27, 2025
HomeSportsCricketRahul out of WTC final : ರಾಹುಲ್‌ಗೆ ಮತ್ತೊಮ್ಮೆ ಕೈ ಕೊಟ್ಟ ಅದೃಷ್ಟ, WTC...

Rahul out of WTC final : ರಾಹುಲ್‌ಗೆ ಮತ್ತೊಮ್ಮೆ ಕೈ ಕೊಟ್ಟ ಅದೃಷ್ಟ, WTC ಫೈನಲ್‌ನಿಂದ ಔಟ್

- Advertisement -

ಬೆಂಗಳೂರು: ಬಲ ತೊಡೆಯ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ಕನ್ನಡಿಗ ಕೆ.ಎಲ್ ರಾಹುಲ್ ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್ ಫೈನಲ್ (ICC World test championship final – WTC final 2023) ಪಂದ್ಯದಲ್ಲಿ ಬಹುತೇಕ ಹೊರ ಬಿದ್ದಿದ್ದಾರೆ. ಮೇ 1ರಂದು ಲಕ್ನೋದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರಾಹುಲ್ ಸ್ನಾಯು ಸೆಳೆತದಿಂದ ಬಳಲಿದ್ದರು. ಗಾಯದ ಪ್ರಮಾಣ ಗಂಭೀರವಾಗಿರುವ ಕಾರಣ ಐಪಿಎಲ್’ನ ಮುಂದಿನ ಪಂದ್ಯಗಳಿಗೆ ರಾಹುಲ್ ಅಲಭ್ಯರಾಗಿದ್ದಾರೆ. ಇದೀಗ ಹೊರ ಬಿದ್ದಿರುವ ಮಾಹಿತಿಯ ಪ್ರಕಾರ WTC ಫೈನಲ್ ಪಂದ್ಯದಲ್ಲೂ ರಾಹುಲ್ (KL Rahul Ruled out WTC) ಆಡುವುದು ಅನುಮಾನ.

ಒಂದು ವೇಳೆ ರಾಹುಲ್ (KL Rahul Ruled out WTC) ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಲಭ್ಯರಾದರೆ ಅವರ ಬದಲು ಕರ್ನಾಟಕದ ಮತ್ತೊಬ್ಬ ಆರಂಭಿಕ ಬ್ಯಾಟ್ಸ್’ಮನ್ ಮಯಾಂಕ್ ಅಗರ್ವಾಲ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. “ರಾಹುಲ್ ಅವರಿಗೆ ಸ್ನಾಯು ಸೆಳೆತಕ್ಕೊಳಗಾಗಿರುವ ಜಾಗದಲ್ಲಿ ಇನ್ನೂ ಊತ ಹಾಗೆಯೇ ಇದೆ. ಗಾಯದ ಪ್ರಮಾಣ ಎಷ್ಟು ಎಂಬುದು ಸ್ಕ್ಯಾನ್ ರಿಪೋರ್ಟ್ ಬಂದ ಬಳಿಕವೇ ತಿಳಿಯಲಿದೆ. ಊತ ಕಡಿಮೆಯಾಗಲು ರಾಹುಲ್ ಮೆಡಿಸಿನ್ ಪಡೆಯುತ್ತಿದ್ದಾರೆ. ಊತ ಕಡಿಮೆಯಾದ ನಂತರವೇ ಸ್ಕ್ಯಾನ್ ನಡೆಯಲಿದೆ. WTC ಫೈನಲ್ ಪಂದ್ಯದಲ್ಲಿ ರಾಹುಲ್ ಆಡುವ ಬಗ್ಗೆ ನಾವು ಇನ್ನೂ ಆಶಾವಾದಿಯಾಗಿದ್ದಾರೆ” ಎಂದು ಬಿಸಿಸಿಐ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

WTC ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿದ್ದ ಎಡಗೈ ವೇಗದ ಬೌಲರ್ ಜೈದೇವ್ ಉನಾದ್ಕಟ್ ಕೂಡ ಗಾಯದಿಂದ ಬಳಲುತ್ತಿದ್ದಾರೆ. ಈಗಾಗಲೇ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah), ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್’ಮನ್ ಶ್ರೇಯಸ್ ಅಯ್ಯರ್ (Shreyas Iyer) ಗಾಯದ ಕಾರಣ WTC ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಬುಮ್ರಾ ಮತ್ತು ಶ್ರೇಯಸ್ ಅಯ್ಯರ್ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಗೊಳಗಾದಿದ್ರೆ, ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಸಿಕೊಳ್ಳುತ್ತಿದ್ದಾರೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್ ಫೈನಲ್ ಪಂದ್ಯಕ್ಕೆ ಪ್ರಕಟಿಸಲಾಗಿರುವ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಲ್ ರಾಹುಲ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜೈದೇವ್ ಉನಾದ್ಕಟ್.

ಇದನ್ನೂ ಓದಿ :‌ Karun Nair : ಐಪಿಎಲ್‌ನಿಂದ ಕೆ.ಎಲ್ ರಾಹುಲ್ ಔಟ್, ಕನ್ನಡಿಗನ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ?

ಇದನ್ನೂ ಓದಿ : ICC ODI World Cup 2023 : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ Vs ಪಾಕಿಸ್ತಾನ ಪಂದ್ಯ, ಅಕ್ಟೋಬರ್ 5ರಿಂದ ವರ್ಲ್ಡ್ ಕಪ್ ಕಿಕ್ ಸ್ಟಾರ್ಟ್

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular