Narenda Modi : ರಾಜಭವನದಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ಅನಿಲ್ ಕುಂಬ್ಳೆ, ಮಯಾಂಕ್ ಅಗರ್ವಾಲ್

ಬೆಂಗಳೂರು: ಕರ್ನಾಟಕದ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ, ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್, ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್, ಮಾಜಿ ನಾಯಕ ಮನೀಶ್ ಪಾಂಡೆ ಬೆಂಗಳೂರಿನ (Prime Minister Modi’s Banquet) ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narenda Modi ) ಅವರನ್ನು ಭೇಟಿ ಮಾಡಿದ್ದಾರೆ.

ಯಲಹಂಕ ಏರ್’ಬೇಸ್ನಲ್ಲಿ ನಡೆಯುವ ಏರೋ ಇಂಡಿಯಾ ಏರ್ ಶೋ ಉದ್ಘಾಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಬೆಂಗಳೂರಿಗೆ ಬಂದಿಳಿದಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಗಣ್ಯರನ್ನು ಔತಣ ಕೂಟಕ್ಕೆ ಆಹ್ವಾನಿಸಿದ್ದದರು. ಕ್ರಿಕೆಟಿಗರು, ಚಿತ್ರರಂಗದ ಗಣ್ಯರು ಮತ್ತು ಉದ್ಯಮಿಗಳನ್ನು ತಮ್ಮ ಔತಣಕೂಟಕ್ಕೆ ಮೋದಿ ಆಹ್ವಾನಿಸಿದ್ದರು.

ಕ್ರಿಕೆಟ್ ವಲಯದಿಂದ ಮಯಾಂಕ್ ಅಗರ್ವಾಲ್ (Mayank Agarwal), ಮನೀಶ್ ಪಾಂಡೆ (Manish Pandey), ಅನಿಲ್ ಕುಂಬ್ಳೆ (Anil Kumble) ದಂಪತಿ, ವೆಂಕಟೇಶ್ ಪ್ರಸಾದ್ (Venkatesh Prasad) ದಂಪತಿ ಪ್ರಧಾನಿ ಮೋದಿ ಔತಣಕೂಟದಲ್ಲಿ ಭಾಗಿಯಾಗಿದ್ದರು. ಚಿತ್ರರಂಗದಿಂದ ನಟ ಯಶ್‌(Yash), ಪುನೀತ್‌ ರಾಜ್‌ಕುಮಾರ್ (Puneeth Rajkumar) ಅವರ ಪತ್ನಿ ಅಶ್ವಿನಿ ಪುನೀತ್ ರಾಜ್’ಕುಮಾರ್ (Ashwini Puneeth Rajkumar), ಕಾಂತಾರಾ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) , ನಿರ್ಮಾಪಕ ವಿಜಯ್ ಕಿರಗಂದೂರು (Vijay Kiragandur), RJ ಶ್ರದ್ಧಾ ಜೈನ್ ಪ್ರಧಾನಿ ಮೋದಿ ಔತಣಕೂಟದಲ್ಲಿ ಭಾಗಿಯಾಗಿ, ಮೋದಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇದನ್ನೂ ಓದಿ : ಮಯಾಂಕ್ ಅಗರ್ವಾಲ್ ದ್ವಿಶತಕ ವ್ಯರ್ಥ : ರಣಜಿ ಸೆಮಿಫೈನಲ್ ಸೋತ ಕರ್ನಾಟಕ

ಇದನ್ನೂ ಓದಿ : Prasidh Krishna : ಪ್ರಸಿದ್ಧ್ ಕೃಷ್ಣಗೆ ಕ್ರಿಕೆಟ್ ಅವಕಾಶ ಕೊಟ್ಟ ಕರ್ನಾಟಕಕ್ಕಿಂತ ಐಪಿಎಲ್ ಟೂರ್ನಿಯೇ ಮುಖ್ಯವಾಯ್ತಾ?

ಇದನ್ನೂ ಓದಿ : Ravindra Jadeja : ಟೆಸ್ಟ್ ಗೆಲುವಿನ ಬೆನ್ನಲ್ಲೇ ರವೀಂದ್ರ ಜಡೇಜಾಗೆ ಶಾಕ್ ಕೊಟ್ಟ ಬಿಸಿಸಿಐ

ಪ್ರಧಾನಿ ಮೋದಿಯವರ ಔತಣಕೂಟದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಲ್ಲದೆ, ಕೆಲ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.ರಾಜ್ಯ ವಿಧಾನಸಭಾ ಚುನಾವಣೆಗೆ ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿದ್ದು, ಅದಕ್ಕೂ ಮೊದಲು ಪ್ರಧಾನಿ ಮೋದಿ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಕಳೆದ ತಿಂಗಳಷ್ಟೇ ರಾಜ್ಯಕ್ಕೆ ಬಂದಿದ್ದ ಮೋದಿ, ಇದೀಗ ಏರೋ ಇಂಡಿಯಾ ಶೋ ನೆಪದಲ್ಲಿ ಮತ್ತೊಮ್ಮೆ ಕರ್ನಾಟಕಕ್ಕೆ ಬಂದಿದ್ದಾರೆ. ಈ ಬಾರಿ ರಾಜ್ಯದ ಗಣ್ಯರನ್ನು ಔತಣಕೂಟಕ್ಕೆ ಆಹ್ವಾನಿಸಿರುವುದು ವಿಶೇಷ.

Prime Minister Modi’s Banquet : Anil Kumble, Mayank Agarwal met Prime Minister Modi at Raj Bhavan

Comments are closed.