ಸೋಮವಾರ, ಜೂನ್ 16, 2025
HomeSportsCricketKL Rahul: ಟೀಮ್ ಇಂಡಿಯಾದಲ್ಲಿ ಬೆಂಚ್ ಕಾಯಿಸುವ ಬದಲು ರಾಹುಲ್ ಅವರನ್ನು ಇರಾನಿ ಕಪ್‌ನಲ್ಲಿ ಆಡಿಸಬಹುದಿತ್ತಲ್ವಾ?

KL Rahul: ಟೀಮ್ ಇಂಡಿಯಾದಲ್ಲಿ ಬೆಂಚ್ ಕಾಯಿಸುವ ಬದಲು ರಾಹುಲ್ ಅವರನ್ನು ಇರಾನಿ ಕಪ್‌ನಲ್ಲಿ ಆಡಿಸಬಹುದಿತ್ತಲ್ವಾ?

- Advertisement -

ಇಂದೋರ್: ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ಆರಂಭಗೊಂಡ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ (India Vs Australia Border-Gavaskar test series) 3ನೇ ಪಂದ್ಯಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಅವರನ್ನು ಟೀಮ್ ಇಂಡಿಯಾದ ಆಡುವ ಬಳಗದಿಂದ ಕೈ ಬಿಡಲಾಗಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳ 3 ಇನ್ನಿಂಗ್ಸ್’ಗಳಲ್ಲಿ ರಾಹುಲ್ ಕೇವಲ 38 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ನಾಗ್ಪುರದಲ್ಲಿ ನಡೆದ ಪ್ರಥಮ ಟೆಸ್ಟ್’ನಲ್ಲಿ 20 ರನ್ ಗಳಿಸಿ ಔಟಾಗಿದ್ದ ರಾಹುಲ್, ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 17 ರನ್ ಮತ್ತು 1 ರನ್ ಗಳಿಸಿ ಔಟಾಗಿದ್ದರು.

ಹೀಗಾಗಿ 3ನೇ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಬದಲು ಸ್ಥಾನ ಪಡೆದ ಯುವ ಬ್ಯಾಟ್ಸ್’ಮನ್ ಶುಭಮನ್ ಗಿಲ್ (Shubman Gill) ದೊಡ್ಡ ಮೊತ್ತ ಗಳಿಸಲು ವಿಫಲವಾಗಿದ್ದಾರೆ. ನಾಯಕ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಟೀಮ್ ಇಂಡಿಯಾ ಇನ್ನಿಂಗ್ಸ್ ಆರಂಭಿಸಿದ ಶುಭಮನ್ ಗಿಲ್ ಕೇವಲ 21 ರನ್ ಗಳಿಸಿ ಔಟಾಗಿದ್ದಾರೆ. ಟೀಮ್ ಇಂಡಿಯಾದಲ್ಲಿ ಬೆಂಚ್ ಕಾಯಿಸುವ ಬದಲು ರಾಹುಲ್ ಅವರನ್ನು ಇರಾನಿ ಕಪ್ (Irani Cup) ಪಂದ್ಯದಲ್ಲಿ ಆಡಿಸಬಹುದಿತ್ತು ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿವೆ.

ರೆಸ್ಟ್ ಆಫ್ ಇಂಡಿಯಾ ಹಾಗೂ 2021-22ನೇ ಸಾಲಿನ ರಣಜಿ ಚಾಂಪಿಯನ್ ಮಧ್ಯಪ್ರದೇಶ ತಂಡಗಳ ನಡುವಿನ ಇರಾನಿ ಕಪ್ ಪಂದ್ಯ ಮಧ್ಯಪ್ರದೇಶದ ಗ್ವಾಲಿಯರ್’ನಲ್ಲಿರುವ ಕ್ಯಾಪ್ಟನ್ ರೂಪ್ ಸಿಂಗ್ ಸ್ಟೇಡಿಯಂನಲ್ಲಿ ಆರಂಭಗೊಂಡಿದೆ. ರೆಸ್ಟ್ ಆಫ್ ಇಂಡಿಯಾ ತಂಡವನ್ನು ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ ಮುನ್ನಡೆಸುತ್ತಿದ್ದಾರೆ.

ಮಧ್ಯಪ್ರದೇಶ ವಿರುದ್ಧದ ಇರಾನಿ ಕಪ್ ಪಂದ್ಯಕ್ಕೆ ರೆಸ್ಟ್ ಆಫ್ ಇಂಡಿಯಾ ತಂಡ:
ಮಯಾಂಕ್ ಅಗರ್ವಾಲ್ (ನಾಯಕ), ಅಭಿಮನ್ಯು ಈಶ್ವರನ್, ಯಶಸ್ವಿ ಜೈಸ್ವಾಲ್, ಯಶ್ ಧುಲ್, ಬಾಬಾ ಇಂದ್ರಜಿತ್, ಉಪೇಂದ್ರ ಯಾದವ್ (ವಿಕೆಟ್ ಕೀಪರ್), ಅತೀತ್ ಸೇಠ್, ಸೌರಭ್ ಕುಮಾರ್, ಹಾರ್ವಿಕ್ ದೇಸಾಯಿ (ವಿಕೆಟ್ ಕೀಪರ್), ನವದೀಪ್ ಸೈನಿ, ಮುಕೇಶ್ ಕುಮಾರ್, ಚೇತನ್ ಸಕಾರಿಯಾ, ಆಕಾಶ್ ದೀಪ್, ಮಯಾಂಕ್ ಮಾರ್ಕಂಡೆ, ಪುಲ್ಕಿತ್ ನಾರಂಗ್, ಸುದೀಪ್ ಕುಮಾರ್ ಫರಮಿ.

English News Click Here

ಇದನ್ನೂ ಓದಿ : KL Rahul: ಕೆ.ಎಲ್ ರಾಹುಲ್‌ಗೆ ಪ್ಲೇಯಿಂಗ್ XIನಿಂದ ಕೊಕ್, ಕನ್ನಡಿಗನ ಬದಲು ಸ್ಥಾನ ಪಡೆದ ಗಿಲ್ ಫೇಲ್

ಇದನ್ನೂ ಓದಿ : India Vs Australia 3rd test : ಸ್ಪಿನ್ ಕೋಟೆಯಲ್ಲಿ ಭಾರತಕ್ಕೆ ಶಾಕ್ ಕೊಟ್ಟ ಕಾಂಗರೂಗಳು, ಮೊದಲ ದಿನವೇ 14 ವಿಕೆಟ್ ಪತನ

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular