Champions trophy 2025 : ಬೆಂಗಳೂರು: ಭಾರತದ ವಿಶ್ವಕಪ್ ಹೀರೋಗಳಲ್ಲಿ ಒಬ್ಬರಾಗಿರುವ ಟರ್ಬನೇಟರ್ ಖ್ಯಾತಿಯ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ವಿರುದ್ಧ ಭಜ್ಜಿ ಕೋಪಕ್ಕೆ ಕಾರಣ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy). ಮಿನಿ ವಿಶ್ವಕಪ್ ಖ್ಯಾತಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮುಂದಿನ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿದೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಗಳಿಲ್ಲ. ಭಾರತ ತಂಡ ಟೂರ್ನಿಯಲ್ಲಿ ಭಾಗವಹಿಸುವ ಬಗ್ಗೆ ಅನುಮಾನಗಳು ಎದ್ದಿರುವ ಕಾರಣ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬಿಸಿಸಿಐ ವಿರುದ್ಧ ಕಿಡಿ ಕಾರಲು ಶುರು ಮಾಡಿದೆ.

“ಭಾರತ ತಂಡ ಪಾಕಿಸ್ತಾನಕ್ಕೆ ಬಾರದೇ ಇದ್ದರೆ ಕತ್ತೆ ಬಾಲ, ಕುದುರೆ ಜುಟ್ಟು” ಎಂದಿರುವ ಪಾಕ್ ಕ್ರಿಕೆಟ್ ಮಂಡಳಿ, ಭಾರತದ ಬದಲು ಶ್ರೀಲಂಕಾ ತಂಡವನ್ನು ಆಡಿಸುವಂತೆ ಐಸಿಸಿಗೆ ಮನವಿ ಮಾಡಲು ನಿರ್ಧರಿಸಿದೆ. ಭಾರತ ತಂಡ ಇಲ್ಲದೆಯೂ ನಾವು ಚಾಂಪಿಯನ್ಸ್ ಟ್ರೋಫಿ ನಡೆಸಿ ಯಶಸ್ವಿಯಾಗಬಲ್ಲೆವು ಎಂದು ಪಾಕ್ ಕ್ರಿಕೆಟ್ ಮಂಡಳಿ ಸವಾಲು ಹಾಕಿದೆ. ಪಾಕ್ ಕ್ರಿಕೆಟ್ ಬೋರ್ಡ್’ನ ಈ ಉದ್ಧಟತನಕ್ಕೆ ಭಾರತದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ : Yuvraj Singh: 42ನೇ ವಯಸ್ಸಲ್ಲೂ ಅದೇ ಖದರ್, ಅದೇ ಪವರ್: ಕಾಂಗರೂ ಬೇಟೆಯಾಡಿದ ಯುವರಾಜ !
“ನಮ್ಮ ಆಟಗಾರರು ಪಾಕಿಸ್ತಾನದಲ್ಲಿ ಸುರಕ್ಷಿತರಾಗಿರುವುದಿಲ್ಲ ಎನ್ನುವುದಾದರೆ ನಾವು ನಮ್ಮ ತಂಡವನ್ನು ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಕಳುಹಿಸುವುದಿಲ್ಲ. ಭಾರತ ಇಲ್ಲದೆಯೂ ನೀವು ಆಡುವಿರಿ ಎಂದಾದರೆ ಆಡಿ. ಬೇಡ ಎಂದರೆ ಬಿಡಿ. ಪಾಕಿಸ್ತಾನವಿಲ್ಲದೆಯೂ ಭಾರತೀಯ ಕ್ರಿಕೆಟ್ ನಡೆಯುತ್ತದೆ. ಭಾರತೀಯ ಕ್ರಿಕೆಟ್ ಇಲ್ಲದೆಯೂ ನಿಮ್ಮ ಕ್ರಿಕೆಟ್ ನಡೆಯುತ್ತದೆ ಎನ್ನುವುದಾದರೆ, ಅದನ್ನೇ ಮಾಡಿ” ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿರುದ್ಧ ಹರ್ಭಜನ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಜ್ಜಿ ಆಕ್ರೋಶದ ನುಡಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
https://x.com/Vipintiwari952/status/1812152841475432845
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಕ್ರಿಕೆಟ್ ತಂಡ ಭಾಗವಹಿಸುವ ಕುರಿತು ಇದುವರೆಗೆ ಯಾವುದೇ ಖಚಿತತೆ ಇಲ್ಲ. ಆದರೆ ಭದ್ರತಾ ದೃಷ್ಟಿಯಿಂದ ಭಾರತ ಆಡುವ ಎಲ್ಲಾ ಪಂದ್ಯಗಳನ್ನು ಲಾಹೋರ್ನಲ್ಲಿ ಆಯೋಜಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಭಾರತ ಕ್ರಿಕೆಟ್ ತಂಡ ಪಾಕಿಸ್ತಾನದ ನೆಲದಲ್ಲಿ ಪಂದ್ಯವನ್ನು ಆಡಲು ನಿರಾಕರಿಸಿದರೆ ಭಾರತ ಆಡುವ ಪಂದ್ಯಗಳು ದುಬೈನಲ್ಲಿ ನಡೆಯುವ ಸಾಧ್ಯತೆಗಳಿಗೆ.

ಈ ಹಿಂದೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆತಿಥ್ಯದಲ್ಲಿ ಆಯೋಜನೆಗೊಂಡಿದ್ದ ಏಷ್ಯಾಕಪ್ ಪಂದ್ಯಾವಳಿಯಲ್ಲಿಯೂ ಭಾರತ ಕ್ರಿಕೆಟ್ ತಂಡದ ಪಂದ್ಯಗಳನ್ನು ಶ್ರೀಲಂಕಾಗೆ ಶಿಫ್ಟ್ ಮಾಡಲಾಗಿತ್ತು. ಪಾಕಿಸ್ತಾನದ ನೆಲದಲ್ಲಿ ಭಾರತ ಕ್ರಿಕೆಟ್ ತಂಡ 2005-06ರಲ್ಲಿ ಕೊನೆಯ ಬಾರಿಗೆ ಸರಿಯನ್ನು ಆಡಿತ್ತು. ಆದರೆ 2008ರಲ್ಲಿ ಮುಂಬೈ ದಾಳಿ ನಡೆದ ನಂತರ ಭಾರತ ಸರಕಾರ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡುವುದಕ್ಕೆ ನಿಷೇಧ ಹೇರಿತ್ತು.
ಇದನ್ನೂ ಓದಿ : KL Rahul- Athiya Shetty : ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಪತ್ನಿ ಸಮೇತ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್ ರಾಹುಲ್
ಆದರೆ ಪಾಕಿಸ್ತಾನ ಕ್ರಿಕೆಟ್ ತಂಡ 2012ರಲ್ಲಿ ಭಾರತ ಪ್ರವಾಸ ಕೈಗೊಂಡಿತ್ತು. 2011ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್, 2016ರಲ್ಲಿ ನಡೆದ ಟಿ20 ವಿಶ್ವಕಪ್ ಹಾಗೂ 2023ರಲ್ಲಿ ಬಿಸಿಸಿಐ ಆಯೋಜನೆ ಮಾಡಿದ್ದ ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ಆಡಲು ಭಾರತಕ್ಕೆ ಬಂದಿತ್ತು. ನಿಯಮದ ಪ್ರಕಾರ ಐಸಿಸಿ ranking ನಲ್ಲಿ ಮೊದಲ 8 ಸ್ಥಾನಗಳನ್ನು ಪಡೆಯುವ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳುತ್ತಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಆಯೋಜನೆಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಪಂದ್ಯ ಫೆಬ್ರವರಿ 19 2025 ರಂದು ಕರಾಚಿಯಲ್ಲಿ ನಡೆಯಲಿದ್ದು, ಮಾರ್ಚ್ 9ರಂದು ನಡೆಯುವ ಫೈನಲ್ ಪಂದ್ಯಕ್ಕೆ ಲಾಹೋರ್ ಆತಿಥ್ಯ ವಹಿಸಲಿದೆ. ಭಾರತ ಕ್ರಿಕೆಟ್ ತಂಡದ ಪಾಲ್ಗೊಳ್ಳುವಿಕೆಯ ಕುರಿತು ಇನ್ನೂ ಖಚಿತವಾಗಿಲ್ಲ.
ಇದನ್ನೂ ಓದಿ : Yuvraj World Record: ಒಬ್ಬ ಯುವರಾಜ, 7 ಕಿರೀಟಗಳು.. ಇದ್ದ ಬದ್ದ ಕಪ್’ಗಳನ್ನೆಲ್ಲಾ ಗೆದ್ದ ಪಂಜಾಬ್ ವೀರಪುತ್ರ!
Harbhajan Singh Vs PCB: The Harbajan Singh that gave Pakistan a huge boost, do you know the reason ?