ತಾಯಿಯ ಬೆನ್ನಲ್ಲೇ ಸಹೋದರಿಯನ್ನು ಕಳೆದುಕೊಂಡ ವೇದಾಕೃಷ್ಣಮೂರ್ತಿ

ಚಿಕ್ಕಮಗಳೂರು : ಭಾರತೀಯ ಮಹಿಳಾ ತಂಡದ ಖ್ಯಾತ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅವರಿಗೆ ಕೊರೊನಾ ವೈರಸ್ ಸೋಂಕು ಬಿಗ್ ಶಾಕ್ ಕೊಟ್ಟಿದೆ. ತಾಯಿ ಸಾವನ್ನಪ್ಪಿದ ಒಂದೇ ವಾರದಲ್ಲಿ ಇದೀಗ ವೇದಾ ಕೃಷ್ಣಮೂರ್ತಿ ಸಹೋದರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವೇದಾ ಕೃಷ್ಣಮೂರ್ತಿ ಅವರ ಸಹೋದರಿ ವತ್ಸಲಾ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ವೇದಾ ಅವರ ತಾಯಿ ಚೆಲುವಾಂಭ ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಅಲ್ಲದೇ ಕುಟುಂಬದ ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ವೇದಾ ಕೃಷ್ಣಮೂರ್ತಿ ಅವರ ಸಹೋದರಿಯ ಅಂತ್ಯಕ್ರೀಯೆ ಕೋವಿಡ್ ನಿಯಮದ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಬೀರೂರು ರಸ್ತೆಯ ಬಳಿಯಲ್ಲಿರುವ ವೇದಾ ಅವರ ಜಮೀನಿನಲ್ಲಿ ನೆರವೇರಲಿದೆ.

Comments are closed.