KL Rahul – Asia Cup : ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಏಷ್ಯಾ ಕಪ್‌ನಲ್ಲೂ ಆಡುವುದು ಡೌಟ್!

ಬೆಂಗಳೂರು : (KL Rahul – Asia Cup) ಟೀಮ್ ಇಂಡಿಯಾ ಏಕದಿನ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ ಮನ್‌ಗಳಾದ ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಮತ್ತು ಮುಂಬೈಕರ್ ಶ್ರೇಯಸ್ ಅಯ್ಯರ್ (Shreyas Iyer) ಏಷ್ಯಾ ಕಪ್ (Asia Cup 2023) ಟೂರ್ನಿಯಲ್ಲೂ ಆಡುವುದು ಅನುಮಾನ.

ಬಲ ತೊಡೆಯ ಸ್ನಾಯು ಸೆಳೆತಕ್ಕೆ ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕೆ.ಎಲ್ ರಾಹುಲ್ ಬೆಂಗಳೂರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (National Cricket Academy – NCA) ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಬೆನ್ನು ನೋವಿನ ಸಮಸ್ಯೆಗೆ ಲಂಡನ್‌ನಲ್ಲೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ ಕೂಡ ಎನ್‌ಸಿಎನಲ್ಲಿದ್ದು, ರಿಹ್ಯಾಬ್ ಸೆಂಟರ್‌ನಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ.

ಇಬ್ಬರೂ ಆಟಗಾರರು ಮುಂಬರುವ ಏಷ್ಯಾ ಕಪ್ ಟೂರ್ನಿಯ ಹೊತ್ತಿಗೆ ಚೇತರಿಸಿಕೊಳ್ಳುವುದು ಅನುಮಾನ ಎಂಬ ಮಾಹಿತಿ ಲಭ್ಯವಾಗಿದೆ. ಏಷ್ಯಾ ಕಪ್ ಟೂರ್ನಿ ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ.

ಟೀಮ್ ಇಂಡಿಯಾ ಏಕದಿನ ತಂಡದ ಮಧ್ಯಮ ಕ್ರಮಾಂಕದ ಆಧಾರಸ್ಥಂಭಗಳಾಗಿರುವ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಲಭ್ಯರಾಗುವ ಸಾಧ್ಯತೆಯಿದೆ. ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಿಂದ ನವೆಂಬರ್ 23ರವರೆಗೆ ಭಾರತದ ಆತಿಥ್ಯದಲ್ಲೇ ನಡೆಯಲಿರುವುದರಿಂದ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಪಾತ್ರ ನಿರ್ಣಾಯಕವಾಗಿರಲಿದೆ.

ಇದನ್ನೂ ಓದಿ : KL Rahul Temple Visit : ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

ಇದನ್ನೂ ಓದಿ : Yashwasvi Jaiswal : ವೆಸ್ಟ್ ಇಂಡೀಸ್‌ನಲ್ಲಿ ಟೆಸ್ಟ್ ಪದಾರ್ಪಣೆ ಮಾಡಲಿದ್ದಾನೆ ಟೀಮ್ ಇಂಡಿಯಾದ ಪಾನಿಪೂರಿ ಹುಡುಗ

31 ವರ್ಷದ ಕೆ.ಎಲ್ ರಾಹುಲ್ ಕಳೆದ ಐಪಿಎಲ್ ಟೂರ್ನಿಯ ವೇಳೆ ಬಲತೊಡೆಯ ಸ್ನಾಯು ಸೆಳೆತಕ್ಕೊಳಗಾಗಿ ಐಪಿಎಲ್ ಟೂರ್ನಿಯಿಂದ ಅರ್ಧದಲ್ಲೇ ಹೊರ ಬಿದ್ದಿದ್ದರು. ನಂತರ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೂ ರಾಹುಲ್ ಅಲಭ್ಯರಾಗಿದ್ದರು. ವೆಸ್ಟ್ ಇಂಡೀಸ್ ಪ್ರವಾಸವನ್ನೂ ತಪ್ಪಿಸಿಕೊಂಡಿರುವ ರಾಹುಲ್ ಏಷ್ಯಾ ಕಪ್ ಟೂರ್ನಿಗೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಗುರಿ ಹೊಂದಿದ್ದಾರೆ. ರಾಹುಲ್ ಭಾನುವಾರವಷ್ಟೇ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.

KL Rahul – Asia Cup: Doubt that KL Rahul and Shreyas Iyer will play in the Asia Cup too!

Comments are closed.