ಮಂಗಳವಾರ, ಜೂನ್ 17, 2025
HomeSportsದಕ್ಷಿಣ ಆಫ್ರಿಕಾ ವಿರುದ್ದದ ಸರಣಿ : ತಂಡಕ್ಕೆ ಮರಳಿದ ಪಾಂಡ್ಯ

ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ : ತಂಡಕ್ಕೆ ಮರಳಿದ ಪಾಂಡ್ಯ

- Advertisement -

ಮುಂಬೈ : ದಕ್ಷಿಣ ಆಫ್ರಿಕಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಗೆ ಸುನಿಲ್ ಜೋಷಿ ನೇತೃತ್ವದ ಆಯ್ಕೆ ಸಮಿತಿ ಭಾರತೀಯ ತಂಡವನ್ನು ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯ, ಶಿಖರ್ ಧವನ್ ತಂಡಕ್ಕೆ ಮರಳಿದ್ದಾರೆ. ನ್ಯೂಜಿಲೆಂಡ್ ವಿರುದ್ದ ಸರಣಿಯಲ್ಲಿ ಹೀನಾಯ ಸೋಲನ್ನು ಕಂಡ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ದ ಸರಣಿಗೆ ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಮಾರ್ಚ್ 12 ರಿಂದ ಭಾರತ ದಕ್ಷಿಣ ಆಫ್ರಿಕಾ ವಿರುದ್ದ ಏಕದಿನ ಸರಣಿಯನ್ನು ಆಡಲಿದೆ.

Team India

ಆರಂಭಿಕರಾಗಿ ಶಿಖರ್ ಧವನ್ ಜೊತೆಗೆ ಪ್ರಥ್ವಿ ಶಾ ಕಣಕ್ಕಿಳಿಯಲಿದ್ದಾರೆ. ಬೂಮ್ರಾ, ಯುಜ್ವೇಂದ್ರ ಚಾಹಲ್, ನವದೀಪ್ ಸೈನಿ, ಭುವನೇಶ್ವರ್ ಕುಮಾರ್ ಹಾಗೂ ಕುಲದೀಪ್ ಯಾದವ್ ತಂಡಕ್ಕೆ ಮರಳಿದ್ದಾರೆ. ಕನ್ನಡಿಗ ಕೆ.ಎಲ್.ರಾಹುಲ್ ಹಾಗೂ ಮನೀಶ್ ಪಾಂಡೆ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಮಾರ್ಚ್ 12 ರಂದು ಧರ್ಮಶಾಲಾದಲ್ಲಿ ಭಾರತ ಮೊದಲ ಪಂದ್ಯವನ್ನು ಆಡಲಿದೆ.
ಭಾರತ ತಂಡ : ಶಿಖರ್ ಧವನ್, ಪೃಥ್ವಿ ಶಾ, ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್, ಜಸ್ ಪ್ರೀತ್ ಬುಮ್ರಾ, ನವದೀಪ್ ಸೈನಿ, ಕುಲದೀಪ್ ಯಾದವ್, ಶುಭ್ಮನ್ ಗಿಲ್.

Ad 1 1
Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular