Accident insurance: KSRTC ಸಿಬ್ಬಂದಿಗೆ ಸಿಹಿಸುದ್ದಿ: 1 ಕೋಟಿ ರೂ. ಮೊತ್ತದ ಅಪಘಾತ ವಿಮೆ ಜಾರಿ

ಬೆಂಗಳೂರು:Accident insurance: ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಮೌಲ್ಯದ ವಿಮೆ ಸೌಲಭ್ಯ ಜಾರಿಗೊಳಿಸಲಾಗಿದೆ. ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಕಾರದಲ್ಲಿ 50 ಲಕ್ಷ ರೂ. ವಿಮೆ ಇದೆ. ಮತ್ತೆ ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಸಹಕಾರದಲ್ಲಿ 50 ಲಕ್ಷ ರೂ. ವಿಮೆ ಸೌಲಭ್ಯ ಒದಗಿಸಲು ಇಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಮೂಲಕ ನಿಗಮದ ಸಿಬ್ಬಂದಿಗೆ ಒಟ್ಟು 1 ಕೋಟಿ ರೂ. ಅಪಘಾತ ವಿಮೆ ಸೌಲಭ್ಯ ಸಿಕ್ಕಂತಾಗಿದೆ.

ಇದನ್ನೂ ಓದಿ: Fuel under GST: ರಾಜ್ಯಗಳು ಒಪ್ಪಿಗೆ ನೀಡಿದರೆ ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ ತರಲು ಸಿದ್ಧ :ಕೇಂದ್ರ ಸರ್ಕಾರ

ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮತ್ತು ಯುನೈಟೆಡ್ ಇಂಡಿಯಾ ವಿಮಾ ಕಂಪೆನಿಯ ಪ್ರಧಾನ ವ್ಯವಸ್ಥಾಪಕ ಅಂಗ್ರೂಪ್ ಸೋನಂ ಒಡಂಬಡಿಕೆಗೆ ಸಹಿ ಹಾಕಿದರು.

ಒಪ್ಪಂದದ ಬಳಿಕ ಮಾತನಾಡಿದ ಕೆಎಸ್ ಆರ್ ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ ಅವರು, ನಿಗಮದ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೂ ಅಥವಾ ಇಲ್ಲದಿದ್ದಾಗಲೂ ಅಪಘಾತದಲ್ಲಿ ಮೃತಪಟ್ಟರೆ ಅಥವಾ ಶಾಶ್ವತವಾಗಿ ಅಥವಾ ತಾತ್ಕಾಲಿಕವಾಗಿ ಅಂಗವೈಕಲ್ಯಕ್ಕೆ ತುತ್ತಾದರೆ 50 ಲಕ್ಷ ರೂ. ವಿಮಾ ಅನ್ವಯವಾಗುತ್ತದೆ. ಶಾಶ್ವತ ಅಂಗವೈಕಲ್ಯಕ್ಕೆ 50 ಲಕ್ಷ ರೂ. ಪರಿಹಾರ, ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 50ಲಕ್ಷ ರೂ. ಪರಿಹಾರದ ಹಣ ತಕ್ಷಣವೇ ದೊರೆಯಲಿದೆ. ಅಪಘಾತದಲ್ಲಿ ಸಿಬ್ಬಂದಿ ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದರೂ 50 ಲಕ್ಷ ರೂ.ಗಳ ವಿಮಾ ಪರಿಹಾರ ಸಿಗಲಿದೆ. ಒಂದು ವೇಳೆ ಸಿಬ್ಬಂದಿಗೆ ತಾತ್ಕಾಲಿಕ ಅಂಗವೈಕಲ್ಯ ಉಂಟಾಗಿ, ತನ್ನ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅಸಮರ್ಥನಾದರೆ ಆತ ಚೇತರಿಸಿಕೊಳ್ಳುವವರೆಗೆ 50 ಲಕ್ಷ ರೂ. ಮೊತ್ತದ ಶೇ.1ರಷ್ಟು ಮೊತ್ತ (5 ಸಾವಿರ ರೂ.) ಪ್ರತಿ ವಾರ ಹೆಚ್ಚಾದಂತೆ ಅಥವಾ ಅವರ ಮಾಸಿಕ ಸಂಬಳದ ಶೇ.25ರಷ್ಟನ್ನು ಸಿಬ್ಬಂದಿಗೆ ವಿಮಾ ಸಂಸ್ಥೆಯು ನೀಡಲಿದೆ. ಈಗಾಗಲೇ ಇದು ಭಾರತೀಯ ಸ್ಟೇಟ್ ಬ್ಯಾಂಕ್ ಸಹಭಾಗಿತ್ವದಲ್ಲಿ ಜಾರಿಯಲ್ಲಿದೆ ಎಂದರು.

ಇದನ್ನೂ ಓದಿ: ಕಲ್ಲುಕ್ವಾರಿಯಲ್ಲಿ ಮಣ್ಣು ಕುಸಿತ : 15 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪೆನಿ ಜೊತೆಗೆ 50 ಲಕ್ಷ ರೂ.ವರೆಗೆ ಅಪಘಾತ ಪರಿಹಾರ ವಿಮಾ ಯೋಜನೆಗೆ ಸಿಬ್ಬಂದಿಗೆ ಒದಗಿಸುವ ನಿಟ್ಟಿನಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ವಿಮಾ ಯೋಜನೆಗೆ ಸಿಬ್ಬಂದಿ ಮಾಸಿಕ 62.50 ರೂ. ಅದಕ್ಕೆ ಜಿಎಸ್ ಟಿ ಸೇರಿದಂತೆ ವಾರ್ಷಿಕ ರೂ.885 ಪಾವತಿಸಬೇಕಾಗುತ್ತದೆ. ಈ ವಿಮಾ ಯೋಜನೆಯನ್ನು ಕಾರ್ಮಿಕರು ಹಾಗೂ ಅವರ ಕುಟುಂಬದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ksrtc ನಿಗಮ ಜಾರಿಗೊಳಿಸುತ್ತಿರುವ ಅತ್ಯುತ್ತಮ ಯೋಜನೆ ಆಗಿದೆ ಎಂದು ಎಂ.ಚಂದ್ರಪ್ಪ ಅವರು ತಿಳಿಸಿದರು.

Accident insurance:: ksrtc is giving 1 crore accident insurance for ksrtc employees

Comments are closed.