ಆದಿಚುಂಚನಗಿರಿ ಶಾಖಾಮಠದ ಸ್ವಾಮೀಜಿ ಕೊರೊನಾಗೆ ಬಲಿ

ಮೈಸೂರು : ಆದಿಚುಂಚನಗಿರಿ ಸಂಸ್ಥಾನದ ಕೆ.ಅರ್. ನಗರದ ಚುಂಚನಕಟ್ಟೆಯಲ್ಲಿರುವ ಶಾಖಾ ಮಠದ ಶ್ರೀ ಶಿವಾನಂದ ನಾಥ ಸ್ವಾಮೀಜಿ ಅವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.

ಶಿವಾನಂದ ಸ್ವಾಮೀಜಿ ಅವರಿಗೆ ಕಳೆದ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ಕಾಣಿಸಿ ಕೊಂಡಿತ್ತು. ಉಸಿರಾಟದ ಸಮಸ್ಯೆಯಿಂದ ಅವರನ್ನು ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್ ಬಳಿಯಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಸ್ವಾಮೀಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಸ್ವಾಮೀಜಿ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Comments are closed.