ಭಟ್ಕಳ ನ್ಯಾಯಾಲಯದಲ್ಲಿ ಅಗ್ನಿ ದುರಂತ : ಬೆಂಕಿಗೆ ಆಹುತಿಯಾಯ್ತು ದಾಖಲೆ ಪತ್ರ

ಕಾರವಾರ : ಜೆ.ಎಂ.ಎಫ್.ಸಿ ನ್ಯಾಯಾಲಯ ಕಟ್ಟಡದಲ್ಲಿ ಮುಂಜಾನೆ ಅಗ್ನಿ ಅವಘಡ ಸಂಭವಿಸಿ, ನ್ಯಾಯಾಲಯದಲ್ಲಿದ್ದ ಕಡತಗಳು ಸಂಪೂರ್ಣ ವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ರಂಗಿನಕಟ್ಟೆಯಲ್ಲಿ ನಡೆದಿದೆ.

ಮುಂಜಾನೆ 4:15 ರ ಸುಮಾರಿಗೆ ಬೆಂಕಿ ಕಾಣಿಸಿ ಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ನ್ಯಾಯಾಲಯ ಕಟ್ಟಡದ ಮುಂದಿನ ಭಾಗ ಸಂಪೂರ್ಣ ಬೆಂಕಿಗೆ ಆಗಹುತಿಯಾಗಿದ್ದು ದಾಖಲೆ ಸಂಪೂರ್ಣ ಸುಟ್ಟು ಕರಕಲಾ ಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ನ್ಯಾಯಾಲಯ ದಲ್ಲಿದ್ದ ಸಾವಿರಾರು ಕೇಸುಗಳ ಕಡತ ಸುಟ್ಟು ಹೋಗಿದೆ.

ಕಾಗದಕ್ಕೆ ಬೆಂಕಿ ಹೊತ್ತಿಕೊಂಡ ಕಾರಣ ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚಾಗಿತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸಾಕಷ್ಟು ಕಡತಗಳನ್ನು ರಕ್ಷಿಸುವ ಪ್ರಯತ್ನ ಮಾಡಿದ್ದು ಸ್ಥಳಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ್ ಶಿವಪೂಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.