MLA Gururaj Gantihole : ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಕಾರು ಅಪಘಾತ

ಶಿವಮೊಗ್ಗ / ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ (MLA Gururaj Gantihole) ಅವರ ಕಾರು ಅಪಘಾತ (MLA Car Accident)ಕ್ಕೆ ಒಳಗಾಗಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ.

ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagar) ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ (Rippenpet) ಸಮೀಪದಲ್ಲಿರುವ ಕೋಡೂರಿನಲ್ಲಿ ಈ ಘಟನೆ ನಡೆದಿದೆ. ಉಡುಪಿ ಕಡೆಗೆ ತೆರಳುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದರೆ ಶಾಸಕರು ಹಾಗೂ ಕಾರಿನಲ್ಲಿ ಇದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Also Read : ಪ್ರಧಾನ ಮಂತ್ರಿ ಕಿಸಾನ್ ಯೋಜನೆ : PM Kissan 20ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ

ಶಿವಮೊಗ್ಗದ ಕಡೆಗೆ ಶಾಸಕರ ಕಾರು ಚಲಿಸುತ್ತಿದ್ದ ವೇಳೆಯಲ್ಲಿ ಜಾನುವಾರು ಅಡ್ಡಬಂದಿದೆ. ಈ ವೇಳೆಯಲ್ಲಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಆದರೆ ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ.

ಉಡುಪಿಗೆ ತೆರಳಬೇಕಾಗಿದ್ದ ಶಾಸಕರು ಸದ್ಯ ಬೇರೊಂದು ಕಾರಿನ ಮೂಲಕ ಬೈಂದೂರಿಗೆ ತೆರಳಿದ್ದಾರೆ. ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

Also Read : ಗೃಹಲಕ್ಷ್ಮೀ ಯಜಮಾನಿಯರಿಗೆ ಭರ್ಜರಿ ಗುಡ್‌ ನ್ಯೂಸ್‌

Byndoor MLA Gururaj Gantihole Car Accident Rippanpet near Shivamogga in Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories