ಬೆಂಗಳೂರಲ್ಲಿ ಸಂತ್ರಸ್ತ ಯುವತಿ..? ಇಂದೇ ಹೇಳಿಕೆ ದಾಖಲಿಸಲು ನ್ಯಾಯಾಧೀಶರ ಅನುಮತಿ

ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯಿಂದ ಹೇಳಿ ದಾಖಲಿಸಲು ನ್ಯಾಯಾಧೀಶರು ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದೇ ಯುವತಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎಂದು ಯುವತಿಯ ಪರ ವಕೀಲ ಜಗದೀಶ್ ಅವರು ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಯುವತಿ ಹೇಳಿಕೆಯನ್ನು ದಾಖಲಿಸಿಕೊಳ್ಳಲು ನ್ಯಾಯಾಧೀಶರು ಒಪ್ಪಿಗೆಯನ್ನು ನೀಡಿದ್ದಾರೆ. ಈ ಕುರಿತ ಆದೇಶ ಪ್ರತಿಯೂ ಲಭಿಸಿದೆ. ಆದರೆ ಎಲ್ಲಿ ಹೇಳಿಕೆಯನ್ನು ದಾಖಲಿಸಬೇಕು ಅನ್ನೋ ಮಾಹಿತಿಯನ್ನು ಈ ಮೇಲ್ ಮೂಲಕ ನೀಡುತ್ತಾರೆ ಎಂದಿದ್ದಾರೆ.

https://kannada.newsnext.live/sri-ramasena-prasad-attavar-arrest-mangalore-cheating-case/

ಯುವತಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಅಗತ್ಯ ಭದ್ರತೆಯನ್ನು ಒದಗಿಸಲು ಪೊಲೀಸರು ಕೂಡ ಒಪ್ಪಿಗೆಯನ್ನು ಸೂಚಿಸಿದ್ದಾರೆ. ನ್ಯಾಯಾಧೀಶರ ಸೂಚನೆಯ ಬಂದ ಬಳಿಕ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ ಎಂದಿದ್ದಾರೆ. ಇನ್ನು ಯುವತಿ ಇಂದೇ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿರೋ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿ ಬೆಂಗಳೂರಿನಲ್ಲಿಯೇ ಇದ್ದಾರೆಯೇ ಅನ್ನುವ ಅನುಮಾನ ವ್ಯಕ್ತವಾಗುತ್ತಿದೆ.

Comments are closed.