ಸೋಮವಾರ, ಏಪ್ರಿಲ್ 28, 2025
HomeBreakingಚಾಮರಾಜನಗರ ದುರಂತ ಪ್ರಕರಣ : ಡಿಸಿ ಕಚೇರಿ ದಾಖಲೆ ಜಪ್ತಿಗೆ ಹೈಕೋರ್ಟ್ ಆದೇಶ

ಚಾಮರಾಜನಗರ ದುರಂತ ಪ್ರಕರಣ : ಡಿಸಿ ಕಚೇರಿ ದಾಖಲೆ ಜಪ್ತಿಗೆ ಹೈಕೋರ್ಟ್ ಆದೇಶ

- Advertisement -

ಬೆಂಗಳೂರು : ಚಾಮರಾಜನಗರ ದುರಂತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯ ದಾಖಲೆಗಳನ್ನು ಜಪ್ತಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ.

ಆಕ್ಸಿಜನ್ ದುರಂತ ಪ್ರಕರಣದಲ್ಲಿ 24 ಮಂದಿ ಸಾವನ್ನಪ್ಪಿದ್ದು, ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಪ್ರಕರಣ ತನಿಖೆಗೆ ಆದೇಶವನ್ನು ನೀಡಿದೆ. ಪ್ರಮುಖವಾಗಿ ಆಕ್ಸಿಜನ್ ಸಾಗಾಟಕ್ಕೆ ಸಂಬಂಧಿಸಿದಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಗಳ ಕಚೇರಿಯಲ್ಲಿರುವ ದಾಖಲೆ ಪತ್ರಗಳನ್ನು ಜಪ್ತಿ ಮಾಡುವಂತೆ ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಗಳಿಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆಯನ್ನು ನೀಡಿದೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ವಿಚಾರಣಾಧಿ ಕಾರಿಗಳು ಪರಿಶೀಲನೆಯನ್ನು ನಡೆಸಬಹುದು ಎಂದು ಹೇಳಿರುವ ಹೈಕೋರ್ಟ್, ದುರಂತ ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಗಳನ್ನು ನೇಮಕ ಮಾಡದಂತೆಯೂ ರಾಜ್ಯ ಸರಕಾರಕ್ಕೆ ಸೂಚನೆಯನ್ನು ನೀಡಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular