ಶನಿವಾರ, ಜೂನ್ 14, 2025
Homekarnatakaಉಡುಪಿ ಜಿಲ್ಲೆಯಲ್ಲಿ ಕಾಲರಾ ಪತ್ತೆ : 11 ಮಂದಿಗೆ ದೃಢ, ಜಿಲ್ಲೆಯಲ್ಲಿ ಹೈಅಲರ್ಟ್

ಉಡುಪಿ ಜಿಲ್ಲೆಯಲ್ಲಿ ಕಾಲರಾ ಪತ್ತೆ : 11 ಮಂದಿಗೆ ದೃಢ, ಜಿಲ್ಲೆಯಲ್ಲಿ ಹೈಅಲರ್ಟ್

Cholera 11 case found in udupi : ಕರಾವಳಿ ಭಾಗದಲ್ಲಿ ಕಾಲರಾ ಪ್ರಕರಣ ಪತ್ತೆಯಾಗಿದೆ. ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 11 ಕಾಲರಾ ಪ್ರಕರಣ ದೃಢಪಟ್ಟಿದೆ

- Advertisement -

ಉಡುಪಿ : ಕರಾವಳಿ ಭಾಗದಲ್ಲಿ ಕಾಲರಾ ಪ್ರಕರಣ ಪತ್ತೆಯಾಗಿದೆ. ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 11 ಕಾಲರಾ ಪ್ರಕರಣ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮುಂಜಾಗೃತೆ ವಹಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Cholera 11 case found in udupi Dc Vidya kumari Declared High Alert
Image Credit to Original Source

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 5 ಕಾಲರಾ ಪ್ರಕರಣ ಪತ್ತೆಯಾಗಿದೆ. ಅಲ್ಲದೇ ಶಿರ್ವ, ಕಾಪು, ಮಲ್ಪೆ, ಕೆಮ್ಮಣ್ಣು ಪ್ರದೇಶಗಳಲ್ಲಿ ಕಾಲರಾ ಪ್ರಕರಣ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಾಲರಾ ರೋಗದ ಬಗ್ಗೆ ಮುಂಜಾಗೃತೆಯನ್ನು ವಹಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ : HSRP Number Plate : ವಾಹನ ಸವಾರರ ಗಮನಕ್ಕೆ: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅವಧಿ ವಿಸ್ತರಣೆ

ಕಾಲರಾ ರೋಗ ಪ್ರಮುಖವಾಗಿ ಕಲುಷಿತ ಆಹಾರ ಸೇವನೆಯಿಂದ ಹರಡುತ್ತದೆ. ಸಾಮಾನ್ಯವಾಗಿ ಕಾಲರಾ ರೋಗಕ್ಕೆ ತುತ್ತಾದ ಸಂದರ್ಭದಲ್ಲಿ ಅತೀಸಾರ ನಿರ್ಜಲೀಕರಣಕ್ಕೆ ಕಾರಣವಾಗುತ್ತಿದೆ. ಬ್ಯಾಕ್ಟೀರಿಯಾದಿಂದ ಕೂಡಿದ ಕಲುಷಿತ ಆಹಾರ ಸೇವನೆಯಿಂದಲೇ ರೋಗ ಪತ್ತೆಯಾಗುತ್ತಿದ್ದು, ವಾಂತಿ ಬೇಧಿ ಕಾಣಿಸಿಕೊಂಡ್ರೆ ಕೂಡಲೇ ವೈದ್ಯರನ್ನು ಸಂಪರ್ಕ ಮಾಡುವುದು ಒಳಿತು. ಆಹಾರ ಮತ್ತು ನೀರಿನಿಂದಲೂ ಕಾಲರಾ ಸೋಂಕು ಹರುಡುತ್ತಿದ್ದು, ಜನರು ಹಣ್ಣು ತರಕಾರಿಗಳನ್ನು ಚೆನ್ನಾಗಿ ತೊಳೆದು ಬಳಕೆ ಮಾಡಬಹುದಾಗಿದೆ.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಪೂರ್ಣಗೊಳಿಸಲು ಹೈಕೋರ್ಟ್‌ ಆದೇಶ : ಕಾಂಗ್ರೆಸ್‌ಗೆ ತೀವ್ರ ಮುಖಭಂಗ

ಉಡುಪಿ ಜಿಲ್ಲೆಯಲ್ಲಿನ ರೆಸ್ಟೋರೆಂಟ್‌, ಹೋಟೆಲ್‌ ಗಳಲ್ಲಿ ಜನರು ಕುಡಿಯಲು ಬಿಸಿ ನೀರು ನೀಡಬೇಕು. ಅಲ್ಲದೇ ಲೋಟ, ತಟ್ಟೆಗಳನ್ನು ಶುಚಿಯಾಗಿ ಇಡಬೇಕು. ಯಾವುದೇ ಆಹಾರವನ್ನು ಜನರಿಗೆ ಸರ್ವ್‌ ಮಾಡುವ ಮೊದಲು ಕೈಯನ್ನು ಚೆನ್ನಾಗಿ ತೊಳೆದುಕೊಂಡಿರಬೇಕು.

Cholera 11 case found in udupi Dc Vidya kumari Declared High Alert
Image Credit to Original Source

ಇನ್ನು ಶಾಲೆ, ಕಾಲೇಜುಗಳಲ್ಲಿಯೂ ಕಾಲರಾ ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಚತೆ ಹೆಚ್ಚಿನ ಆಧ್ಯತೆಯನ್ನು ನೀಡಬೇಕಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಕೈಗಳನ್ನು ತೊಳೆದು ಆಹಾರ ವಸ್ತುಗಳನ್ನು ಸೇವನೆ ಮಾಡುವಂತೆ ನೋಡಿಕೊಳ್ಳಬೇಕು. ಅಲ್ಲದೇ ಜಿಲ್ಲೆಯಾಧ್ಯಂತ ಸಾರ್ವಜನಿಕರು ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ :

ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್‌ ಬಾಯಲ್‌, ಎಂಐಟಿ ನಿರ್ದೇಶಕ ಡಾ| ಅನಿಲ್‌ ರಾಣಾ, ಎಂಐಟಿ ಉಪನಿರ್ದೇಶಕ ಸೋಮಶೇಖರ ಭಟ್‌, ಡಿಎಚ್‌ಒ ಡಾ| ಐ.ಪಿ ಗಡಾದ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ನಾಗರತ್ನ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಭಟ್‌, ಪೌರಾಯುಕ್ತ ರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

Cholera 11 case found in udupi Dc Vidya kumari Declared High Alert

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular