ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಿ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಅಲ್ಲದೇ 500 ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಎರಡನೇ ಹಂತದ ಪ್ಯಾಕೇಜ್ ನಲ್ಲಿ ಪವರ್ ಲೂಮ್ ನೇಕಾರರಿಗೆ 3 ಸಾವಿರ ರೂಪಾಯಿ, ಚಲನ ಚಿತ್ರ, ದೂರ ದರ್ಶನ, ಮಾಧ್ಯಮದವರಿಗೆ 3 ಸಾವಿರ, ಮೀನುಗಾರರಿಗೆ ( ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೊಂದಾಯಿಸಿದ ಮೀನುಗಾರರಿಗೆ) ತಲಾ 3 ಸಾವಿರ ಹಾಗೂ ನಾಡ ದೋಣಿ ಮಾಲೀಕರಿಗೆ 3 ಸಾವಿರ ರೂ. ಘೋಷಣೆ ಮಾಡಿದ್ದಾರೆ.
ರಾಜ್ಯದ 42,574 ಆಶಾ ಕಾರ್ಯಕರ್ತರಿಗೆ ತಲಾ ಮೂರು ಸಾವಿರ, ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ, ಮುಜುರಾಯಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳಿಗೆ ಸಿ ವರ್ಗದ ದೇವಸ್ಥಾನದಲ್ಲಿ ಕೆಲಸ ಮಾಡುವಂತ ತಲಾ ಮೂರು ಸಾವಿರ ಹಾಗೂ ಮಸೀದಿಯ ಧರ್ಮ ಗುರು ಗಳಿಗೂ 3 ಸಾವಿರ ರೂಪಾಯಿ ಪರಿಹಾರ ಧನ ಘೋಷಣೆ ಮಾಡಿದ್ದಾರೆ.
ಶಾಲೆಗಳು ಮುಚ್ಚಿದ್ದರೂ ಕೂಡ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಜೊತೆಗೆ ಅರ್ಧ ಕೆ.ಜಿ. ಹಾಲಿನ ಪುಡಿ ನೀಡಲಾಗುತ್ತದೆ. ಇನ್ನು ಸಂಕಷ್ಟದಲ್ಲಿರುವ ಅನುಧಾನ ರಹಿತ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ, ನ್ಯಾಯವಾದಿಗಳ ಕಲ್ಯಾಣ ನಿಧಿಗೆ 5 ಕೋಟಿ ನೀಡಲು ನೀಡಲಾಗು ವುದು ಎಂದಿದ್ದಾರೆ.
ರಾಜ್ಯದಲ್ಲಿರುವ ಕೈಗಾರಿಕೆಗಳಿಗೆ ಜೂನ್ 2021 ನಿಗದಿತ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಎಂಎಸ್ಎಂಇ ಕೈಗಾರಿಕೆ ಹೊರತುಪಡಿಸಿ, ಇತರೆ ಕೈಗಾರಿಕೆಗಳ ಗ್ರಾಹಕರಿಗೆ ಮೇ, ಜೂನ್ ತಿಂಗಳ ವಿದ್ಯುತ್ ಶುಲ್ಕ ಪಾವತಿಯಿಂದ ಜುಲೈ 30ರವರೆಗೆ ವಿನಾಯ್ತಿ ನೀಡಲಾಗಿದೆ ಎಂದರು.