ಭಾನುವಾರ, ಏಪ್ರಿಲ್ 27, 2025
HomekarnatakaCongress government : ಕೋವಿಡ್ ಅಕ್ರಮ ತನಿಖೆ : ಬಿಜೆಪಿ ಶಾಕ್ ಕೊಡಲು ಸಜ್ಜಾದ ಸಿಎಂ...

Congress government : ಕೋವಿಡ್ ಅಕ್ರಮ ತನಿಖೆ : ಬಿಜೆಪಿ ಶಾಕ್ ಕೊಡಲು ಸಜ್ಜಾದ ಸಿಎಂ ಸಿದ್ದರಾಮಯ್ಯ

- Advertisement -

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರವು (Congress government) ಹಿಂದಿನ ಬಿಜೆಪಿ ಆಡಳಿತದಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಆಮ್ಲಜನಕ ಪೂರೈಕೆಯಲ್ಲಿನ ಅವ್ಯವಹಾರಗಳ ಬಗ್ಗೆ ತನಿಖೆ ಮಾಡಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರ ಆದೇಶ ಹೊರಡಿಸಿದ್ದು, ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ಆಯೋಗವು ಮೂರು ತಿಂಗಳಲ್ಲಿ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ಹೇಳಿದೆ. ಸರಕಾರದ ಪ್ರಕಾರ, ಜುಲೈ-ಆಗಸ್ಟ್‌ನಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ತನ್ನ ವರದಿಯಲ್ಲಿ ಔಷಧಿಗಳು, ಉಪಕರಣಗಳ ಖರೀದಿ ಮತ್ತು ಆಕ್ಸಿಜನ್ ದುರುಪಯೋಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದೆ. ಇದನ್ನೂ ಓದಿ : Bengaluru’s Namma Metro : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳು ನೀಡಬೇಕು ಎಂದು ಕಾಂಗ್ರೆಸ್‌ ಸರಕಾರದ ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಧಿಕಾರಕ್ಕೆ ಬಂದರೆ ಅಕ್ರಮಗಳ ಬಗ್ಗೆ ನ್ಯಾಯಯುತ ತನಿಖೆ ನಡೆಸುವುದಾಗಿ ಭರವಸೆ ನೀಡಿತ್ತು. ಇದನ್ನೂ ಓದಿ : Gruha Arogya : ಗೃಹ ಆರೋಗ್ಯ: ಗೃಹಜ್ಯೋತಿ, ಗೃಹಲಕ್ಷ್ಮೀ ಬೆನ್ನಲ್ಲೇ ಮತ್ತೊಂದು ಹೊಸ ಯೋಜನೆ ಘೋಷಿಸಿದ ರಾಜ್ಯ ಸರಕಾರ

Gruha Arogya : ಗೃಹ ಆರೋಗ್ಯ: ಗೃಹಜ್ಯೋತಿ, ಗೃಹಲಕ್ಷ್ಮೀ ಬೆನ್ನಲ್ಲೇ ಮತ್ತೊಂದು ಹೊಸ ಯೋಜನೆ ಘೋಷಿಸಿದ ರಾಜ್ಯ ಸರಕಾರ

ಬೆಂಗಳೂರು : ಕರ್ನಾಟಕ ಸರಕಾರ ರಾಜ್ಯದ ಜನರಿಗಾಗಿ ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿದೆ. ವರಮಹಾಲಕ್ಷ್ಮೀ ಹಬ್ಬದ ಬೆನ್ನಲ್ಲೇ ರಾಜ್ಯ ಸರಕಾರ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಕರ್ನಾಟಕ ಸರಕಾರ ಈ ಯೋಜನೆಗೆ ಗೃಹ ಆರೋಗ್ಯ ಯೋಜನೆ (Gruha Arogya) ಎಂದು ನಾಮಕರಣ ಮಾಡಲಾಗಿದೆ. ಈ ಯೋಜನೆಯ ಮೂಲಕ ವೈದ್ಯರು ಮನೆ ಬಾಗಿಲಿಗೆ ಬರಲಿದ್ದಾರೆ. ಅಷ್ಟಕ್ಕೂ ಈ ಯೋಜನೆಯ ಲಾಭಗಳೇನು ಅನ್ನೋ ವರದಿ ಇಲ್ಲಿದೆ.

ಗೃಹ ಆರೋಗ್ಯ ಯೋಜನೆ ಬಡವರ ಪಾಲಿನ ಸಂಜೀವಿನಿ. ಈ ಯೋಜನೆಯ ಮೂಲಕ ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಆಯ್ದ ಸಮಸ್ಯೆಗಳಿಗೆ ಉಚಿತ ಔಷಧಿಗಳನ್ನು ಸ್ಥಳದಲ್ಲಿಯೇ ವಿತರಿಸಲಾಗುತ್ತದೆ. ಈಗಾಗಲೇ ‘ಗೃಹ ಆರೋಗ್ಯ’ ಯೋಜನೆಯನ್ನು ಜಾರಿಗೆ ತರಲು ಸರಕಾರ ನಿರ್ಧರಿಸಿದೆ. ಮೊದಲಿಗೆ ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಜಾರಿಯಾಗಲಿದ್ದು, ನಂತರ ಇತರ ಜಿಲ್ಲೆಗಳಿಗೂ ವಿಸ್ತರಣೆಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಯೋಜನೆ ಸಿದ್ಧಪಡಿಸಲಾಗಿದೆ. ಸಮಸ್ಯೆ ಉಲ್ಬಣಗೊಂಡ ನಂತರ ಚಿಕಿತ್ಸೆ ನೀಡುವ ಬದಲು, ರೋಗ ಕಾಣಿಸಿಕೊಳ್ಳುವ ಮೊದಲು ಪರೀಕ್ಷಿಸಿ ಚಿಕಿತ್ಸೆ ನೀಡಲಾಗುತ್ತದೆ.

ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಸಿಬ್ಬಂದಿ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಎಲ್ಲ ಸದಸ್ಯರನ್ನು ತಪಾಸಣೆ ಮಾಡುತ್ತಾರೆ. ಬಿಪಿ, ಮಧುಮೇಹದಂತಹ ಸಣ್ಣಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧ ನೀಡಿ, ಸಂಕೀರ್ಣ ಪ್ರಕರಣಗಳನ್ನು ಪತ್ತೆ ಹಚ್ಚಿ, ಗಂಭೀರ ಸಮಸ್ಯೆ ಇರುವವರನ್ನು ಗುರುತಿಸಿ ಸೂಕ್ತ ಚಿಕಿತ್ಸೆಗೆ ಶಿಫಾರಸು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Congress government: Covid illegal investigation: CM Siddaramaiah is ready to shock the BJP

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular