Cooker bomb trial blast case: ತೀರ್ಥಹಳ್ಳಿಯಲ್ಲಿ ದಿಢೀರ್ ದಾಳಿ ನಡೆಸಿದ ಎನ್‌ಐಎ

ಶಿವಮೊಗ್ಗ: (Cooker bomb,trial blast case) ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತೀರ್ಥಹಳ್ಳಿಯಲ್ಲಿ ಎನ್‌ ಐ ಎ ತನಿಖಾ ತಂಡ ದಿಢೀರ್‌ ದಾಳಿ ನಡೆಸಿದ್ದು, ಶಂಕಿತ ಉಗ್ರ ಶಾರೀಖ್‌ ಮತ್ತು ಮಿನೀರ್‌ ನಿವಾಸಗಳ ಮೇಲೆ ದಾಳಿ ನಡೆಸಿದೆ.

ಮಂಗಳೂರು ಬಾಂಬ್‌ ಸ್ಫೋಟ ಪ್ರಕರಣ(Cooker bomb,trial blast case)ಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಸೊಪ್ಪುಗುಡ್ಡೆಯಲ್ಲಿರುವ ಶಂಕಿತ ಉಗ್ರ ಶಾರೀಖ್‌ ಹಾಗೂ ಮಾಜ್‌ ಮುನೀರ್‌ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ದಳ ದಿಢೀರ್‌ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹದಿನೈದಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ತನಿಖೆಗೆ ಇಳಿದಿದ್ದು, ಇಬ್ಬರು ಶಂಕಿತ ಉಗ್ರ ಮನೆಗಳಲ್ಲಿ ದಾಖಲೆಯನ್ನು ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ, ಹಾಗೂ ತುಂಗಾ ದಡದಲ್ಲಿ ಟ್ರಯಲ್‌ ಬ್ಲಾಸ್ಟ್‌ ಪ್ರಕರಣದ ಸಂಬಂಧ ರಾಷ್ಟ್ರೀಯ ತನಿಖಾ ದಳ ತನಿಖೆ ಚುರುಕುಗೊಳಿಸಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಏನಿದು ಪ್ರಕರಣ (Cooker bomb,trial blast case)?
ಕಳೆದ ವರ್ಷ ನವೆಂಬರ್‌ ನಲ್ಲಿ ಮಂಗಳೂರಿನ ಪಂಪ್‌ವೆಲ್‌ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಸಂಭವಿಸಿತ್ತು. ಇದಕ್ಕೂ ಮುನ್ನ ದಾರಿ ಮಧ್ಯೆ ಪ್ರಯಾಣಿಕನೊಬ್ಬ ಕೈಯಲ್ಲಿ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ್ದ. ಆತ ನಾಗುರಿಗೆ ಹೋಗಲು ಚಾಲಕನಿಗೆ ಸೂಚಿಸಿದ್ದ. ಆದರೆ ಕೆಲವೇ ಕ್ಷಣಗಳಲ್ಲಿ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆಯ ಎದುರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿದೆ. ಶಂಕಿತನ ಕೈಯಲ್ಲಿದ್ದ ಕುಕ್ಕರ್ ಸ್ಪೋಟದ ತೀವ್ರತೆಗೆ ಛಿದ್ರಗೊಂಡಿದೆ. ಈ ಕುರಿತು ಪೊಲೀಸ್‌ ಅಧಿಕಾರಿಗಳು ಇಂಚಿಂಚು ಮಾಹಿತಿಗಳನ್ನು ಕಲೆ ಹಾಕಿದ್ದು, ಈಗಾಲೇ ಸಾಕಷ್ಟು ಮಾಹಿತಿಗಳು ಬಯಲಾಗಿವೆ.

ಇದನ್ನೂ ಓದಿ : ಹೆಬ್ರಿ : ಭಕ್ತರಿಗೆ ಗನ್ ತೋರಿಸಿ ಜೀವಬೆದರಿಕೆ, ಮಾನಹಾನಿ : ಚರ್ಚ್ ಧರ್ಮಗುರು ವಿರುದ್ದ ದೂರು, ಪ್ರತಿದೂರು ದಾಖಲು

ಇದನ್ನೂ ಓದಿ : Dakshina Kannada Congress Candidates: : ದಕ್ಷಿಣ ಕನ್ನಡ ಕಾಂಗ್ರೆಸ್ ನಲ್ಲಿ ಎಲ್ಲವೂ ಹೊಸಮುಖ : ಹೈಕಮಾಂಡ್ ಹೊಸ ಸೂತ್ರ ಬಹುತೇಕ ಅಂತಿಮ !

ಇದನ್ನೂ ಓದಿ : Sara Abubakar: ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್‌ ನಿಧನ

ಇನ್ನಷ್ಟು ಮಾಹಿತಿಗಳನ್ನು ಬಯಲಿಗೆಳೆಯುವ ಕಾರ್ಯ ಪೊಲೀಸ್‌ ಹಾಗೂ ರಾಷ್ಟ್ರೀಯ ತನಿಖಾ ತಂಡದಿಂದ ನಡೆಯುತ್ತಿದೆ. ಇದೀಗ ಸದ್ಯ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ನ ಆರೋಪಿ ಉಗ್ರ ಶಾರೀಖ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದಾನೆ. ತನಿಖಾ ದಳ ಆತನನ್ನು ವಸಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಆತನ ಜೊತೆಗಿದ್ದ ಇನ್ನೋರ್ವ ಶಂಕಿತ ಮಾಝ್‌ ಮುನೀರ್‌ ಓದಿದ ಕಾಲೇಜಿಗೆ ತನಿಖಾ ತಂಡ ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಇದೀಗ ಶಿವಮೊಗ್ಗದಲ್ಲಿನ ಶಂಕಿತ ಉಗ್ರರ ಮನೆಗೂ ತನಿಖಾ ತಂಡ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ತನಿಖಾ ತಂಡ ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಬಯಲಿಗೆಳೆಯುವ ಪಣ ತೊಟ್ಟಿದೆ.

Cooker bomb blast case: NIA conducted a surprise attack in Theerthahalli

Comments are closed.