ಸೋಮವಾರ, ಮೇ 12, 2025
HomeBreakingರಾಜ್ಯದಲ್ಲಿ 29 ಸಾವಿರ‌ ಮಂದಿಗೆ ಸೋಂಕು : 208 ಮಂದಿ ಬಲಿ ಪಡೆದ ಕೊರೊನಾ

ರಾಜ್ಯದಲ್ಲಿ 29 ಸಾವಿರ‌ ಮಂದಿಗೆ ಸೋಂಕು : 208 ಮಂದಿ ಬಲಿ ಪಡೆದ ಕೊರೊನಾ

- Advertisement -

ಬೆಂಗಳೂರು : ಕೊರೊನಾ‌ ವೈರಸ್ ಸೋ‌ಂಕಿನ ಆರ್ಭಟ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚರಿಸು ತ್ತಿಲ್ಲ. ರಾಜ್ಯದಲ್ಲಿಂದು ಬರೋಬ್ಬರಿ 29,438 ಮಂದಿಗೆ ಕೊರೊನಾ ದೃಢಪಟ್ಟಿದ್ದು, 208 ಮಂದಿಯನ್ನು ಬಲಿ ಪಡೆದಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗಿದೆ. ಅದ್ರಲ್ಲೂ ಬೆಂಗಳೂರಿನಲ್ಲೊಂದೇ ಇಂದು 17,342 ಜನರಿಗೆ ಸೋಂಕು ಖಚಿತವಾಗಿದೆ. ಅಷ್ಟೇ ಅಲ್ಲ 149 ಮಂದಿ ಸಾವನ್ನಪ್ಪುವ ಮೂಲಕ ಮೃತಪಟ್ಟವರ ಪೈಕಿ ಬೆಂಗಳೂರಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾ ವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 13,04,397ಕ್ಕೆ ಏರಿಕೆಯಾಗಿದೆ.

ಈವರೆಗೆ ರಾಜ್ಯದ ಸೋಂಕಿತರ ಪೈಕಿ 10,55,612 ಜನರು ಗುಣಮುಖ ರಾಗಿ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ ಒಟ್ಟು 2,34,483 ಸಕ್ರೀಯ ಪ್ರಕರಣಗಳಿದ್ದು  ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗು ತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular