ಮದ್ಯಪ್ರಿಯರಿಗೆ ಬಿಗ್ ಶಾಕ್ : ಅಕ್ಟೋಬರ್ 28ರ ವರೆಗೆ ಬಾರ್ ಬಂದ್ !!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ ಸೇರಿದಂತೆ ಒಟ್ಟು 4 ಕ್ಷೇತ್ರಗಳಿಗೆ ಬುಧವಾರ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಗೆ ಸೇರಿದ ಜಿಲ್ಲೆಗಳಲ್ಲಿ ಬಾರ್ ಆಂಡ್ ರೆಸ್ಟೋರೆಂಟ್, ವೈನ್ ಶಾಪ್ ಹಾಗೂ ಎಂಎಸ್ ಐಎಸ್ ಮಳಿಗೆಗಳು ಇಂದು ಸಂಜೆ 6 ಗಂಟೆಯಿಂದಲೇ ಮುಂದಿನ 48 ಗಂಟೆಗಳ ವರೆಗೆ ಬಂದ್ ಆಗಲಿವೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಬಳ್ಳಾರಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮದ್ಯ ಲಭಿಸುವುದಿಲ್ಲ.

Comments are closed.