BJP MLA : ಶಾಸಕ ಸತೀಶ್‌ ರೆಡ್ಡಿಗೆ ಸೇರಿದ ಎರಡು ಕಾರುಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಬೆಂಗಳೂರು : ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್‌ ರೆಡ್ಡಿ ಅವರ ಮನೆಯಲ್ಲಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿಯ ಕೆನ್ನಾಲಗೆಗೆ ಕಾರುಗಳು ಸುಟ್ಟು ಕರಕಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರದ ಬೊಮ್ಮನಹಳ್ಳಿಯಲ್ಲಿರುವ ಸತೀಶ್‌ ರೆಡ್ಡಿ ಅವರ ಮನೆಯ ಹೊರಭಾಗದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ನಾಲ್ವರು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಫಾರ್ಚೂನರ್‌ ಸೇರಿದಂತೆ ಇನ್ನೊಂದು ಕಾರು ಸುಟ್ಟು ಹೋಗಿದೆ. ಆದರೆ ಯಾವ ಕಾರಣಕ್ಕೆ ಬೆಂಕಿ ಹಚ್ಚಿದ್ದಾರೆ ಅನ್ನೋದು ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ಆಯುಕ್ತ ಮುರುಗನ್‌ ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಈ ಕುರಿತು ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರುಇದೀಗ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Comments are closed.