ಹಿಂದುತ್ವವೇ ಜಾತ್ಯತೀತತೆ; ಭಟ್ಕಳದಲ್ಲಿ ಘರ್ಜಿಸಿದ ಹಿಂದೂ ಹುಲಿ ಅನಂತ್‌ ಕುಮಾರ್‌ ಹೆಗಡೆ

Ananth Kumar Hegde speech at Hindu Sangama Bhatkal: ಬರೋಬ್ಬರಿ 3,000ಕ್ಕೂ ಹೆಚ್ಚು ಜನರು ಭಾಗವಹಿಸಿದ್ದ ಈ ಸಮಾವೇಶದಲ್ಲಿ ಹೆಗಡೆಯವರ ಹಳೇ ಶೈಲಿಯ ಘರ್ಜನೆ ಮರುಕಳಿಸಿದ್ದು, ಅವರು ಮತ್ತೆ ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳುವ ಸ್ಪಷ್ಟ ಸೂಚನೆ ನೀಡಿದ್ದಾರೆ.

ಭಟ್ಕಳ: ಲೋಕಸಭಾ ಚುನಾವಣೆಯ ಟಿಕೆಟ್ ಕೈತಪ್ಪಿದ ನಂತರ ಸುಮಾರು ಎರಡು ವರ್ಷಗಳ ಕಾಲ ಸಾರ್ವಜನಿಕವಾಗಿ ಮೌನಕ್ಕೆ ಶರಣಾಗಿದ್ದ ಮಾಜಿ ಸಂಸದ ಅನಂತ್‌ ಕುಮಾರ್ ಹೆಗಡೆ (Ananth Kumar Hegde), ಇಂದು ಭಟ್ಕಳದಲ್ಲಿ ನಡೆದ ‘ಹಿಂದೂ ಸಂಗಮ’ ಸಮಾವೇಶದ ಮೂಲಕ (Bhatkal Hindu Sangam Event) ಭರ್ಜರಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಈ ಆಕ್ರಮಣಕಾರಿ ಭಾಷಣವು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಹೆಗಡೆ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆಯೇ ಎಂಬ ಕುತೂಹಲ ಮೂಡಿಸಿದೆ.

ಬರೋಬ್ಬರಿ 3,000ಕ್ಕೂ ಹೆಚ್ಚು ಜನರು ಭಾಗವಹಿಸಿದ್ದ ಈ ಸಮಾವೇಶದಲ್ಲಿ ಹೆಗಡೆಯವರ ಹಳೇ ಶೈಲಿಯ ಘರ್ಜನೆ ಮರುಕಳಿಸಿದ್ದು, ಅವರು ಮತ್ತೆ ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳುವ ಸ್ಪಷ್ಟ ಸೂಚನೆ ನೀಡಿದ್ದಾರೆ.

[youtube https://www.youtube.com/watch?v=QA28TTkVMIY]

Exit mobile version