ಬೆಂಗಳೂರು : ರಾಜ್ಯದಲ್ಲಿ ಜಾರಿಯಲ್ಲಿರುವ ವೀಕೆಂಡ್ ಕರ್ಪ್ಯೂ ರದ್ದು ಮಾಡಿದ ಬೆನ್ನಲ್ಲೇ ರಾಜ್ಯ ಸರಕಾರ ಮದ್ಯಪ್ರಿಯರಿಗೆ ಗುಡ್ನ್ಯೂಸ್ ಕೊಟ್ಟಿದೆ. ವೀಕೆಂಡ್ ಅವಧಿಯಲ್ಲಿಯೂ (Liquor Shop Open) ಬಾರ್, ರೆಸ್ಟೋರೆಂಟ್, ಪಬ್ ಓಪನ್ ಆಗಿರಲಿದೆ. ಮದ್ಯಪ್ರಿಯರಿಗೆ ಕುಳಿತು ಮದ್ಯ ಸೇವನೆ ಮಾಡಲು ಅವಕಾಶ ಕಲ್ಪಿಸಿದೆ.
ಕಳೆದ ಮೂರು ವಾರಗಳಿಂದಲೂ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದ್ದು, ಶನಿವಾರ ಹಾಗೂ ಭಾನುವಾರ ಸಂಪೂರ್ಣವಾಗಿ ಕರುನಾಡು ಸ್ತಬ್ಧವಾಗಿತ್ತು. ಅಲ್ಲದೇ ಬಾರ್, ಪಬ್, ರೆಸ್ಟೋರೆಂಟ್ ಹಾಗೂ ವೈನ್ ಶಾಪ್ಗಳು ಕೂಡ ಸಂಪೂರ್ಣವಾಗಿ ಬಂದ್ ಆಗಿತ್ತು. ಆದರೆ ಇದೀಗ ವೀಕೆಂಡ್ ಕರ್ಪ್ಯೂ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಬಾರ್, ಪಬ್, ರೆಸ್ಟೋರೆಂಟ್ಗಳು ಎಂದಿನಂತೆಯೇ ಕಾರ್ಯನಿರ್ವಹಿಸಲಿವೆ. ಆದರೆ ಶೇ.೫೦ರಷ್ಟು ಗ್ರಾಹಕರಿಗೆ ಮಾತ್ರವೇ ಅವಕಾಶವನ್ನು ಕಲ್ಪಿಸಲಾಗಿದೆ.
ವೀಕೆಂಡ್ ಕರ್ಪ್ಯೂ ರದ್ದಾಗುತ್ತಲೇ ಉದ್ಯಮಿಗಳು ಜೊತೆಗೆ ಮದ್ಯಪ್ರಿಯರು ಸಖತ್ ಖುಷಿಯಾಗಿದ್ದಾರೆ. ಕಳೆದ ಒಂದು ವಾರದಿಂದಲೂ ರಾಜ್ಯದಾದ್ಯಂತ ವೀಕೆಂಡ್ ಕರ್ಪ್ಯೂ ರದ್ದು ಮಾಡುವಂತೆ ಉದ್ಯಮಿಗಳು, ಜನಸಾಮಾನ್ಯರು ಆಗ್ರಹಿಸಿದ್ದರು. ವಿರೋಧ ಪಕ್ಷಗಳು ಕೂಡ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದವು. ಇದೇ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಪ್ಯೂ ರದ್ದು ಮಾಡಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ. ಜೊತೆಗೆ ಸದ್ಯ ಕರ್ನಾಟಕದಲ್ಲಿ ಜಾರಿಯಲ್ಲಿರುವ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ರದ್ದತಿಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ತಜ್ಞರು, ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ರು. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. ಸಭೆಯ ನಂತರ ಅವರು ಮಾತನಾಡಿದರು. ರಾಜ್ಯದಲ್ಲಿ 50: 50 ರೂಲ್ಸ್ ಜಾರಿಯಲ್ಲಿ ಇರಲಿದೆ. ಅಲ್ಲದೇ ನೈಟ್ ಕರ್ಪ್ಯೂ ಅವಧಿ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರಲಿದೆ. ಸದ್ಯದ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ತೀರಾ ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಒಂದೊಮ್ಮೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದ್ರೆ ಮತ್ತೆ ವೀಕೆಂಡ್ ಕರ್ಪ್ಯೂ ಸೇರಿದಂತೆ ಕಠಿಣ ರೂಲ್ಸ್ ಜಾರಿಯಾಗಲಿದೆ.
ಇದನ್ನೂ ಓದಿ : ಹೊಸ ಆರ್ಥಿಕ ವರ್ಷಕ್ಕೆ ಹೊಸ ಆಯ-ವ್ಯಯ: ಗರಿಗೆದರುತ್ತಿರುವ ಕುತೂಹಲ – ನಿರೀಕ್ಷೆಗಳೇನು?
ಇದನ್ನೂ ಓದಿ : ಕರ್ನಾಟಕದಲ್ಲಿ ವೀಕೆಂಡ್ ಕರ್ಪ್ಯೂ ರದ್ದು, ಜ.29 ರ ವರೆಗೆ ಬೆಂಗಳೂರಿನ ಶಾಲೆ ಬಂದ್
( liquor shop open Karnataka in weekend )