ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಿ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯನ್ನು ನೀಡಿದ್ದಾರೆ.


ಬೆಂಗಳೂರಲ್ಲಿ ರಾಜ್ಯಪಾಲರ ನೇತೃತ್ವದ ಸಭೆಯಲ್ಲಿ ಬಾಗಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯಪಾಲರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯ ಕುರಿತು ಅಪಸ್ವರ ಎತ್ತಿದ್ದು, ಸಂವಿಧಾನ ಬಾಹಿರವಾಗಿದೆ ಎಂದಿದ್ದಾರೆ. ಅಲ್ಲದೇ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿ ದ್ದಾರೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮವನ್ನು ಕೈಗೊಳ್ಳಿ. ತಾನು ಲಾಕ್ ಡೌನ್ ಮಾಡಿ ಎಂದು ಹೇಳುವುದಿಲ್ಲ. ಬದಲಾಗಿ ಕೋವಿಡ್ ತಾಂತ್ರಿಕ ಸಮಿತಿ ನೀಡುವ ಸೂಚನೆ ನೀಡಿದ್ರೆ, ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿ ಎಂದಿದ್ದಾರೆ.

ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ 144 ಸೆಕ್ಷನ್ ಜಾರಿ ಮಾಡಿ. ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ವಲಸೆಯನ್ನು ತಪ್ಪಿಸಿ. ಇತರ ರಾಜ್ಯಗಳಿಂದ ಬರುವ ವಿಮಾನಗಳನ್ನು ನಿಷೇಧಿಸಿ. ರಾಜ್ಯದಲ್ಲಿ ಕೊರೊನಾ ತಡೆಗೆ ಕಠಿಣ ನಿಯಮ ಜಾರಿಗೆ ತರಲೇ ಬೇಕು ಎಂದು ಅವರು ಸಲಹೆ ನೀಡಿದ್ದಾರೆ. 

Comments are closed.