ಸೋಮವಾರ, ಏಪ್ರಿಲ್ 28, 2025
HomeBreakingRain Alert : ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

Rain Alert : ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

- Advertisement -

ಬೆಂಗಳೂರು : ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನ ಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಜುಲೈ 17ರ ವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅಲ್ಲದೇ ಮಲೆನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಜುಲೈ 15 ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನು ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 14 ರಿಂದ 17 ರವರೆಗೆ ಗುಡುಗು ಸಹಿತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಈ ಬಾರಿ ವಾಡಿಕೆಯಂತೆ ಮಳೆಯಾಗಿಲ್ಲ. ಆದ್ರೆ ಜುಲೈ ತಿಂಗಳಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಮಳೆ ಯ ಆರ್ಭಟ ಇನ್ನಷ್ಟು ದಿನಗಳ ವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ನಾಡದೋಣಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆಯನ್ನು ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಸಾರ್ವಜನಿಕ ಸೊತ್ತುಗಳಿಗೆ ಹಾನಿಯಾದ ಘಟನೆ ಸಂಭವಿಸಿದೆ.

ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಗುಡ್ಡ ಪ್ರದೇಶ ದಲ್ಲಿ ವಾಸಿಸುವವರಿಗೆ ಎಚ್ಚರಿಕೆಯನ್ನು ನೀಡಲಾಗಿದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕ್ರಮಕೈಗೊಂಡಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular