RCB victory parade stampede Case : ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಇದೇ ಮೊದಲ ಬಾರಿಗೆ ಟ್ರೋಫಿ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆಯಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ದಯಾನಂದ್ ಹಾಗೂ ಇತರ ಅಧಿಕಾರಿಗಳನ್ನು ಅಮಾನತ್ತು ಮಾಡಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸಚಿವ ಸಂಪುಟ ಸಭೆ ನಡೆಸಿದ ಬಳಿದ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತರಾಗಿರುವ ದಯಾನಂದ್, ಬೆಂಗಳುರು ಕೇಂದ್ರ ವಿಭಾಗದ ಡಿಸಿಪಿ ಎಚ್.ಟಿ. ಶೇಖರ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಎಸಿಪಿ ಬಾಲಕೃಷ್ಣ, ಸ್ಥಳೀಯ ಕಬ್ಬನ್ ಪಾರ್ಕ್ ಎಸ್ಐ ಗಿರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು ಕಾಲ್ತುಳಿತ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಐಪಿಎಲ್ ಪ್ರಾಂಚೈಸಿ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕಾರ್ಯಕ್ರಮ ಆಯೋಜಕ ಡಿಎನ್ಎ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಒಟ್ಟು ಮೂರು ಸಂಸ್ಥೆಗಳ ವಿರುದ್ದ ಕಾನೂನು ಕ್ರಮ ಜರುಗಿಸಿ ಎಫ್ಐಆರ್ ದಾಖಲು ಮಾಡುವಂತೆ ಆದೇಶಿಸಲಾಗಿದೆ.
ಇದನ್ನೂ ಓದಿ : RCB IPL 2025 ಗೆಲುವಿನ ಸಂಭ್ರಮದಲ್ಲಿ ಸೂತಕ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ 11 ಬಲಿ
ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.
RCB victory parade stampede Case : ಸರಕಾರದ ವಿರುದ್ದ ಯಾಕಿಲ್ಲ ಕ್ರಮ ?
ಬೆಂಗಳೂರಿನಲ್ಲಿ ಆರ್ಸಿಬಿ ಸಂಭ್ರಮಾಚರಣೆಯ ವೇಳೆಯಲ್ಲಿ ನಡೆದಿರುವ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಪೊಲೀಸರ ವಿರುದ್ದ ಕ್ರಮಕೈಗೊಂಡಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಎಸಗಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಆದರೆ ಆರ್ಸಿಬಿ ತಂಡವನ್ನು ವಿಧಾನಸೌದದ ಮೆಟ್ಟಿಲ ಮೇಲೆ ಅಭಿನಂದಿಸಿರೋದು ಯಾರು ? ಆರ್ಸಿಬಿ ತಂಡ ಬೆಂಗಳೂರಿಗೆ ಆಗಮಿಸಿದಾಗ ಮೊದಲು ಸ್ವಾಗತ ಕೋರಿದ್ದು ಯಾರು ? ಬೆಂಗಳೂರು ನಗರದಲ್ಲಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಅನ್ನೋ ಮಾಹಿತಿ ಸರಕಾರಕ್ಕೆ ಇರಲಿಲ್ಲವೇ ?
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳ ತಲೆದಂಡವಾಗಿದೆ. ತನಿಖೆ ನಡೆದು ತಪ್ಪಿತಸ್ಥರು ಯಾರು ಅನ್ನೋದು ಬಯಲಿಗೆ ಬರಲಿದೆ. ಆದರೆ ಪ್ರಾಣ ಕಳೆದುಕೊಂಡ ಅಮಾಯಕರ ಪ್ರಾಣವನ್ನು ಮರಳಿ ತರೋದಕ್ಕೆ ಸಾಧ್ಯವೇ ? ಸಿಎಂ ಸಿದ್ದರಾಮಯ್ಯ ಕಣ್ಣೀರು ಸುರಿಸಿ ಪರಿಹಾರ ನೀಡಿದ್ರೆ ಅಮೂಲ್ಯ ಜೀವಗಳನ್ನು ಮರಳಿ ತರೋದಕ್ಕೆ ಸಾಧ್ಯವೇ ? ಆತುರಾತುರವಾಗಿ ಆಯೋಜನೆ ಆಗಿರುವ ಕಾರ್ಯಕ್ರಮಕ್ಕೆ ಸರಕಾರ ಅನುಮತಿ ಕೊಟ್ಟಿದ್ಯಾಕೆ ? ಬೆಂಗಳೂರಿನ ಇತಿಹಾಸದಲ್ಲಿಯೇ ದೊಡ್ಡ ದುರಂತ ಸಂಭವಿಸಿದೆ.
ಇದನ್ನೂ ಓದಿ : ಈ ಸಲ ಕಪ್ ನಮ್ದು: ವಿರಾಟ್ ಕೊಹ್ಲಿಯ 18 ವರ್ಷಗಳ ವನವಾಸ ಅಂತ್ಯ, RCB ಐಪಿಎಲ್ 2025 ಚಾಂಪಿಯನ್
ಈ ಘಟನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಕೂಡ ಹೊಣೆಗಾರರು. ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡಿ ತಾವು ನುಣುಚಿಕೊಳ್ಳುವ ಕಾರ್ಯ ಮಾಡೋದು ಬೇಡಾ. ಈ ಮೂವರು ಯಾವಾಗ ರಾಜೀನಾಮೆ ನೀಡ್ತಾರೆ ಅಂತಾ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.
IPL 2025 RCB victory parade stampede Case Bengaluru Police Officers suspended cas Handover to CID Kannada News