ಬೆಂಗಳೂರು : ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಘಟನೆಯಲ್ಲಿ ಶಶಿಕುಮಾರ್ ಅವರ ಕೈಗೆ ಗಾಯವಾಗಿದ್ದು, ಆರೋಪಿಗಳು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಬೆಂಗಳೂರಿನ ಬಿಇಎಲ್ ಸರ್ಕಲ್ ಬಳಿಯಲ್ಲಿರುವ ಶಶಿಕುಮಾರ್ ಅವರ ಮನೆಯ ಮುಂಭಾಗದಲ್ಲಿಯೇ ಈ ಘಟನೆ ಸಂಭವಿಸಿದೆ. ಇಂದು ರಾತ್ರಿ 9 ಗಂಟೆಯ ಸುಮಾರಿಗೆ ಮೊಬೈಲ್ ನಲ್ಲಿ ಮಾತನಾಡುತ್ತಾ ಕಾರಿನಲ್ಲಿ ಬಂದಿದ್ದಾರೆ. ಕಾರಿನಿಂದ ಇಳಿಯುತ್ತಿದ್ದಂತೆಯೇ ನಾಲ್ವರು ದುಷ್ಕರ್ಮಿಗಳು ಶಶಿಕುಮಾರ್ ಅವರ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಕೂಡಲೇ ಶಶಿಕುಮಾರ್ ಅವರು ತನ್ನ ಕಾರಿನಲ್ಲಿದ್ದ ಗನ್ ತೆಗೆಯುತ್ತಿದ್ದಂತೆಯೇ ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಶಶಿಕುಮಾರ್ ಅವರು ದುಷ್ಕರ್ಮಿಗಳನ್ನು ಹಿಂಬಾಲಿಸಿದ್ದಾರೆ. ಘಟನೆಯಲ್ಲಿ ಶಶಿಕುಮಾರ್ ಅವರ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳಿ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ದುಷ್ಕರ್ಮಿಗಳು ಹಲ್ಲೆ ನಡೆಸುತ್ತಿರೋದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಲ್ವರು ಹಂತಕರು ಶಶಿಕುಮಾರ್ ಅವರು ಬರೋದನ್ನೇ ಕಾಯುತ್ತಿದ್ದರು. ಶಶಿಕುಮಾರ್ ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಹಲ್ಲೆ ನಡೆಸಿದ್ದಾರೆ. ಆದರೆ ಘಟನೆ ಯಾವ ಕಾರಣಕ್ಕೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಆದರೆ ಶಶಿಕುಮಾರ್ ಅವರು ಚಿಕಿತ್ಸೆಯನ್ನು ಪಡೆದುಕೊಂಡಿದ್ದು, ಸದ್ಯ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕೂಡ ಶಶಿಕುಮಾರ್ ಅವರನ್ನು ಕಿಡ್ನಾಪ್ ಮಾಡೋದಕ್ಕೆ ಯತ್ನ ನಡೆದಿದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದ್ರೆ ಈ ಘಟನೆ ಯಾವ ಕಾರಣಕ್ಕೆ ನಡೆದಿದೆ ಅನ್ನೋದು ಗೊತ್ತಿಲ್ಲ ಎಂದು ಶಶಿಕುಮಾರ್ ತಿಳಿಸಿದ್ದಾರೆ.