Karnataka Assembly Election 2023: ಬಿಜೆಪಿ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ-ಪ್ರಭಾರಿಯಾಗಿ ಅಣ್ಣಾಮಲೈ ನೇಮಕ

ಬೆಂಗಳೂರು: (Karnataka Assembly Election 2023) ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023 ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಿಸಲಾಗಿದೆ. ಬಿಜೆಪಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ನೇಮಿಸಿದ್ದು, ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರನ್ನು ಬಿಜೆಪಿ ಉಸ್ತುವಾರಿಯಾಗಿ, ಹಾಗೂ ರಾಜ್ಯಾಧ್ಯಕ್ಷರು, ತಮಿಳುನಾಡು, ಶ್ರೀ ಕೆ. ಅಣ್ಣಾಮಲೈ ಅವರನ್ನು ಕರ್ನಾಟಕ ರಾಜ್ಯದ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಹ-ಪ್ರಭಾರಿಯಾಗಿ ನೇಮಕ ಮಾಡಿದ್ದಾರೆ.” ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ಈ ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದೆ ಎನ್ನಲಾಗಿದೆ. ಧರ್ಮೇಂದ್ರ ಪ್ರಧಾನ್ ಅವರು ಈಗಾಗಲೇ 2011 ರಿಂದ 2013 ರವರೆಗೆ ಬಿಜೆಪಿ ಕರ್ನಾಟಕ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದು, ಮತ್ತೊಂದೆಡೆ, ಅಣ್ಣಾಮಲೈ ಅವರು ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿಯಾಗಿ ತಮ್ಮ ಸೇವೆಗೆ ಹೆಸರುವಾಸಿಯಾಗಿದ್ದಾರೆ. ಅವರನ್ನು ಕರ್ನಾಟಕದಲ್ಲಿ ಸಿಂಗಂ ಅಣ್ಣಾಮಲೈ ಎಂದೂ ಪ್ರೀತಿಯಿಂದ ಕರೆಯುತ್ತಿದ್ದರು.

2011ರಲ್ಲಿ ಸೇವೆಗೆ ಸೇರಿದ್ದ ಅಣ್ಣಾಮಲೈ 2019ರಲ್ಲಿ ತಮ್ಮ ಸೇವೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಪ್ರಸ್ತುತ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 2023 ರ ಮೊದಲು ನಡೆಯಲಿದೆ. ಆದ್ದರಿಂದ, ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆಯ ಎಲ್ಲಾ 224 ಸದಸ್ಯರ ಚುನಾವಣೆಯನ್ನು ಶೀಘ್ರದಲ್ಲೇ ಅಧಿಸೂಚಿಸಲಿದೆ.

ಇದನ್ನೂ ಓದಿ :ಬಿಜೆಪಿ ಕೋರ್ ಕಮಿಟಿ ಸಭೆ: ಬಹುಮತ ಪಡೆಯಲು ABCD ಸೂತ್ರ!

ಇದನ್ನೂ ಓದಿ : Kiccha Sudeep join Congress : ಕೈಪಾಳಯ ಸೇರ್ತಾರಾ ಹೆಬ್ಬುಲಿ: ಡಿಕೆಶಿ ಜೊತೆ ಕಿಚ್ಚ ಸುದೀಪ್ ಪೋಟೋ ವೈರಲ್

ಮೇ 2018 ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ, ಜನತಾ ದಳ (ಜಾತ್ಯತೀತ) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದವು. 2018ರ ಚುನಾವಣೆಯ ನಂತರ ಜೆಡಿಎಸ್‌ ನಾಯಕ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ, ಸಮ್ಮಿಶ್ರ ಸರ್ಕಾರ ಜುಲೈ 2019 ರಲ್ಲಿ ಪತನಗೊಂಡು ಬಿಜೆಪಿ ಸರ್ಕಾರ ರಚಿಸಿತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಕ್ಷವು ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಆಗಿ ನೇಮಿಸಿತು. ನಂತರ, ಯಡಿಯೂರಪ್ಪ 2021 ರಲ್ಲಿ ರಾಜೀನಾಮೆ ನೀಡಿದರು. ಇವರ ನಂತರ ಬಸವರಾಜ ಬೊಮ್ಮಾಯಿ ರಾಜ್ಯದ ಸಿಎಂ ಆಗಿ ಅಧಿಕಾರಕ್ಕೆ ಬಂದರು.

Karnataka Assembly Election 2023: BJP appoints Dharmendra Pradhan as in-charge, Annamalai as co-in-charge

Comments are closed.