ಭಾನುವಾರ, ಏಪ್ರಿಲ್ 27, 2025
HomeBreakingರಾಜ್ಯದಲ್ಲಿಂದು ಕೊರೊನಾ ಸುನಾಮಿ : 24 ಗಂಟೆಯಲ್ಲಿ 34,804 ಮಂದಿಗೆ ಸೋಂಕು

ರಾಜ್ಯದಲ್ಲಿಂದು ಕೊರೊನಾ ಸುನಾಮಿ : 24 ಗಂಟೆಯಲ್ಲಿ 34,804 ಮಂದಿಗೆ ಸೋಂಕು

- Advertisement -

ಬೆಂಗಳೂರು : ಕೊರೊನಾ ಎರಡನೇ ಅಲೆಯ ಆರ್ಭಟಕ್ಕೆ ಕರುನಾಡು ತತ್ತರಿಸಿ ಹೋಗಿದೆ. ರಾಜ್ಯದಲ್ಲಿಂದು ಬರೋಬ್ಬರಿ 34,804  ಮಂದಿಗೆ ಸೋಂಕು ದೃಢಪಟ್ಟಿದ್ದು, 143 ಮಂದಿ ಸಾವನ್ನಪ್ಪಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಇಂದು ಬರೋಬ್ಬರಿ 20,733 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 77 ಮಂದಿಯನ್ನು ಬಲಿಪಡೆದಿದೆ. ಸಿಲಿಕಾನ್ ಸಿಟಿಯಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1,80,542 ಕ್ಕೆ ಏರಿಕೆಯಾಗಿದೆ. 

ಬೆಂಗಳೂರು ನಗರ 20,733, ಬಾಗಲಕೋಟೆ 390, ಬಳ್ಳಾರಿ 732, ಬೆಳಗಾವಿ 336, ಬೆಂಗಳೂರು ಗ್ರಾಮಾಂತರ 864, ಬೀದರ್ 406, ರಾಯಚೂರು 643, ರಾಮನಗರ 225, ಶಿವಮೊಗ್ಗ 418, ತುಮಕೂ ರು 1,153, ಉಡುಪಿ 319, ಉತ್ತರ ಕನ್ನಡ 243, ಚಾಮರಾಜನಗರ 284, ಚಿಕ್ಕಬಳ್ಳಾಪುರ 434, ಚಿಕ್ಕಮಗಳೂರು 247, ಚಿತ್ರದುರ್ಗ 100, ದಕ್ಷಿಣ ಕನ್ನಡ 564, ದಾವಣಗೆರೆ 242, ಧಾರವಾಡ 546, ಗದಗ 76, ಹಾಸನ 768, ಹಾವೇರಿ 99, ಕಲಬುರಗಿ 626, ಕೊಡಗು 1,077, ಕೋಲಾರ 782, ಕೊಪ್ಪಳ 152, ಮಂಡ್ಯ 814, ಮೈಸೂರು 700,  ವಿಜಯಪುರ 468 ಮತ್ತು ಯಾದಗಿರಿಯಲ್ಲಿ 363 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ 2,62,162 ಸಕ್ರಿಯ ಪ್ರಕರಣಗಳಿದ್ದು, 1,492 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13,39,201ಕ್ಕೆ ಏರಿಕೆಯಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular