ಭಾನುವಾರ, ಏಪ್ರಿಲ್ 27, 2025
HomeBreakingಮೇ 12ರ ಬಳಿಕವೂ ವಿಸ್ತರಣೆಯಾಗುತ್ತೆ ಜನತಾ ಲಾಕ್ ಡೌನ್ ..!!

ಮೇ 12ರ ಬಳಿಕವೂ ವಿಸ್ತರಣೆಯಾಗುತ್ತೆ ಜನತಾ ಲಾಕ್ ಡೌನ್ ..!!

- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಜನತಾ ಲಾಕ್ ಡೌನ್ ಜಾರಿ ಮಾಡಲಾಗಿದೆ.‌ ಮೇ 12ರ‌ವರೆಗೆ ಜನತಾ ಕರ್ಪ್ಯೂ ಜಾರಿಯಲ್ಲಿರಲಿದೆ. ಆದರೆ ರಾಜ್ಯ ಸರಕಾರ ಮತ್ತೊಂದು ವಾರ ಜನತಾ ಕರ್ಪ್ಯೂ ವಿಸ್ತರಣೆಗೆ ಚಿಂತನೆ ನಡೆಸಿದೆ.

ಕೊರೊನಾ ವೈರಸ್ ವೇಗ ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿ ರೋದು ಸರ್ಕಾರದ ಆತಂಕ ಮೂಡಿಸಿದೆ. ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸಿಎಂ ಯಡಿಯೂರಪ್ಪ ಸೂಚನೆಯನ್ನು ‌ನೀಡಿದ್ದಾರೆ. ಸದ್ಯ‌ ಜಾರಿಯಲ್ಲಿರುವ ನಿಯಮಗಳನ್ನು ಇನ್ನಷ್ಟು ದಿನಗಳವರೆಗೆ ವಿಸ್ತರಿಸುವ ಕುರಿತು ಸಚಿವರು, ತಜ್ಞರ ಜೊತೆ ಚರ್ಚಿಸುವ ಸಾಧ್ಯತೆಯಿದೆ. ಒಂದೊಮ್ಮೆ ಕೊರೊನಾ ನಿಯಂತ್ರಣಕ್ಕೆ ಸಿಗದಿದ್ರೆ ಮೇ 19ರವರೆಗೆ ಜನತಾ ಲಾಕ್‍ಡೌನ್ ವಿಸ್ತರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆದಿವೆ.

ರಾಜ್ಯದಲ್ಲಿ ದಿನೇ ದಿನೇ ಕೊರೊನಾ‌ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ. ನಿತ್ಯವೂ ಸರಾಸರಿ 35 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಈಗಾಗಲೇ ಹಲವು ರಾಜ್ಯಗಳು ಲಾಕ್ ಡೌನ್ ವಿಸ್ತರಣೆಯನ್ನು ಮಾಡಿವೆ. ಈ ಹಿನ್ನೆಲೆಯಲ್ಲಿ ಸರಕಾರ ಲಾಕ್ ಡೌನ್ ವಿಸ್ತರಣೆಗೆ ಮುಂದಾಗಿದೆ ಎನ್ನಲಾಗುತ್ತಿದೆ. 

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular