Dasara: ಕೊರೋನಾ ಎಫೆಕ್ಟ್: ಈ ಭಾರಿಯೂ ಸರಳಾ ದಸರಾಗೆ ನಿರ್ಧಾರ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ದಸರಾ ಉತ್ಸವವನ್ನು ಕಳೆದ ವರ್ಷದಂತೆಯೇ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ದಸರಾ ಆಚರಣೆ ಕುರಿತಂತೆ ದಸರಾ ಸಮಿತಿ ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸಾಂಪ್ರದಾಯಿಕ ಹಾಗೂ ಸರಳ ದಸರಾ ಆಚರಣೆಗೆ ತೀರ್ಮಾನಿಸಲಾಗಿದೆ.

ಹಿಂದಿನವರ್ಷದಂತೆ ಸರಳವಾಗಿ ದಸರಾ ಆಚರಿಸಲಾಗುತ್ತದೆ. ಇದಕ್ಕಾಗಿ 6 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ. ಅರಮನೆ ಆವರಣದಲ್ಲಿ ಮಾತ್ರ ಜಂಬೂಸವಾರಿ ನಡೆಯಲಿದೆ ಎಂದು ಸಿಎಂ ವಿವರಣೆ ನೀಡಿದ್ದಾರೆ.

ಅಕ್ಟೋಬರ್ 7 ರಂದು ದಸರಾ ಉದ್ಘಾಟನೆಯಾಗಲಿದ್ದು, ಅಕ್ಟೋಬರ್ 15 ರಂದು ಜಂಬೂಸವಾರಿ ನಡೆಯಲಿದೆ. ಕಳೆದ ವರ್ಷ ಜಂಬೂ ಸವಾರಿಗೆ 150 ಜನರಿಗೆ ಅವಕಾಶ ನೀಡಲಾಗಿದ್ದು, ಈ ವರ್ಷ 200 ಜನರಿಗೆ ನೀಡಲಾಗುತ್ತಿದೆ.  

Cm bommai decided to celebrate simple dasara.

Comments are closed.