Karnataka Rain Alert‌ : ಕರ್ನಾಟಕದ 9 ಜಿಲ್ಲೆಗಳಲ್ಲಿ ಜೂನ್‌ 2 ರವರೆಗೆ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಈ ವರ್ಷ ವರುಣ ಆರ್ಭಟ ಜೋರಾಗಿದ್ದು, ಸಿಲಿಕಾನ್‌ ಸಿಟಿಯಲ್ಲಿ ಜನರ ಜೀವನ (Karnataka Rain Alert) ಕಷ್ಟಕರವಾಗಿದೆ. ಹೀಗಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡುಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್‌ 2 ವರೆಗೂ ಬಿಟ್ಟು ಬಿಡದೇ ಮಳೆಯಾಘಲಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್‌ ಘೋಷಣೆಯಾಗಿದೆ.

ಇನ್ನು ಕರಾವಳಿ ಭಾಗಕ್ಕೆ ಬಂದರೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಹಾಗೆಯೇ ರಾಜ್ಯದ ಕೆಲವು ಭಾಗದಲ್ಲಿ ಗರಿಷ್ಠ ಉಷ್ಣಾಂಶವು ಇರಲಿದ್ದು, ಇನ್ನು ಕೆಲವೆಡೆ ಸಾಮಾನ್ಯ ಉಷ್ಣಾಂಶದಿಂದ ಕೂಡಿರುತ್ತದೆ.

ಇದನ್ನೂ ಓದಿ : Karnataka school summer holiday : ಕರ್ನಾಟಕ ಶಾಲಾ ಬೇಸಿಗೆ ರಜೆ ಮೇ 31ವರೆಗೆ ವಿಸ್ತರಣೆ

ಇದನ್ನೂ ಓದಿ : Praveen Nettaru wife reappoint : ಪ್ರವೀಣ್ ನೆಟ್ಟಾರು ಪತ್ನಿ ಮರುನೇಮಕ : ಸರಕಾರದ ಕೈವಾಡವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಇನ್ನುಳಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭಾರೀ ಗಾಳಿ ಬೀಸುತ್ತಿದೆ. ಮಳೆಯಾಗುವ ಸಂದರ್ಭದಲ್ಲಿ ಮತ್ತಷ್ಟು ಗಾಳಿ ವೇಗ ಹೆಚ್ಚಾಗಲಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Karnataka Rain Alert : Heavy rain likely till June 2 in 9 districts of Karnataka : Yellow alert announced

Comments are closed.