ಮೋಚಾ ಚಂಡಮಾರುತ : ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಮೋಚಾ ಚಂಡಮಾರುತದ ಅಲೆಯಿಂದಾಗಿ ಕರಾವಳಿಯ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ (Karnataka Rainfall) ಮಳೆಯಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸದ್ಯದಲ್ಲೇ ಮುಂಗಾರು ಮಳೆ ಶುರುವಾಗಲಿದ್ದು, ರಾಜ್ಯದಲ್ಲಿ ರೈತರು ತಮ್ಮ ವ್ಯವಸಾಯದ ಪೂರ್ವಭಾವಿ ಕೆಲಸದಲ್ಲಿ ತೊಡಗಿದ್ದಾರೆ. ಹೀಗಾಗಿ ವರುಣನ ಆಗಮನದಿಂದ ಸಂತಸಗೊಂಡಿದ್ದು, ಗುಡುಗು ಮಿಂಚಿನಿಂದ ಆತಂಕಕ್ಕೆ ಒಳಗಾಗಿದ್ದಾರೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಮತ್ತು ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳಬಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ರಾಣೆಬೆನ್ನೂರು, ಹಳಿಯಾಳ, ಆಳಂದ, ಬಾಳೆಹೊನ್ನೂರು, ಶಿವನಿ, ಎನ್‌ಆರ್‌ಪುರ, ಚನ್ನರಾಯಪಟ್ಟಣ, ಹುಂಚದಕಟ್ಟೆ, ಟಿ ನರಸೀಪುರ, ಮಂಠಾಳ, ಶಿಗ್ಗಾಂವ್, ರಬಕವಿ, ಭಾಲ್ಕಿ, ಅಣ್ಣಿಗೆರೆ, ಚಿಕ್ಕಮಗಳೂರು, ಕೊಳ್ಳೇಗಾಲ, ಭಾಗಮಂಡಲ, ಲಕ್ಷ್ಮೇಶ್ವರ, ಗದಗ, ಕಳಸ, ಅಜ್ಜಂಪುರ, ಆನವಟ್ಟಿ, ಪೊನ್ನಂಪೇಟೆ, ಬೆಳ್ಳೂರು, ತಿಪಟೂರು, ಬಂಡೀಪುರ, ಶಿವಮೊಗ್ಗ, ಚಾಮರಾಜನಗರ, ಬಸವಾಸಿ, ಜೇವರ್ಗಿ, ಖಜೂರಿ, ಧಾರವಾಡ, ಹಾನಗಲ್‌, ಕುಂದಗೋಳ, ಸೈದಾಪುರ, ಬಸವನ ಬಾಗೇವಾಡಿ, ಕಲಬುರಗಿ, ಸಂಕೇಶ್ವರ, ಶ್ರವಣಬೆಳಗೊಳ, ದಾವಣಗೆರೆ, ಸೋಮವಾರಪೇಟೆ, ಹೆಸರಘಟ್ಟ, ರಾಮನಗರಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ವರದಿ ತಿಳಿಸಿದೆ.

ಇದನ್ನೂ ಓದಿ : ಶಿವಮೊಗ್ಗ ಬಸ್‌ ಅಪಘಾತದಲ್ಲಿ ಇಬ್ಬರು ಸಾವು : 30 ಕ್ಕೂ ಅಧಿಕ ಮಂದಿಗೆ ಗಾಯ

ಇದನ್ನೂ ಓದಿ : Shivamogga BUS Accident : ಶಿವಮೊಗ್ಗದಲ್ಲಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ

ಸದ್ಯ ಈಗ ಮೋಡ ಸ್ವಚ್ಛವಾದ ಆಕಾಶವಿದ್ದು, ಸಂಜೆ ಮೋಡ ಕವಿದ ವಾಥಾವರಣ ನಿರ್ಮಾಣವಾಗಿ ಮಳೆಯಾಘುವ ಸಾಧ್ಯತೆ ಇದೆ. ರಾಮನಗರ, ಕೋಲಾರ, ಯಾದಗಿರಿ, ತುಮಕೂರಿನ ಹಲವಡೆಯೂ ಮಳೆ ಆಗಿದೆ. ಬೀದರ್‌, ರಾಯಚೂರು, ವಿಜಯಪುರ, ಬಳ್ಳಾರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರಿನ ಅಲ್ಲಲ್ಲಿ ಮಳೆ ಆಗುವ ಸಂಭವ ಇರುತ್ತದೆ.

Karnataka Rainfall: Cyclone Mocha: Heavy rain is likely in more than 20 districts of the state

Comments are closed.