ಮಂಗಳವಾರ, ಜೂನ್ 17, 2025
Homekarnatakaweekend Curfew canceled : ಕರ್ನಾಟಕದಲ್ಲಿ ವೀಕೆಂಡ್‌ ಕರ್ಪ್ಯೂ ರದ್ದು, ಜ.29 ರ ವರೆಗೆ ಬೆಂಗಳೂರಿನ...

weekend Curfew canceled : ಕರ್ನಾಟಕದಲ್ಲಿ ವೀಕೆಂಡ್‌ ಕರ್ಪ್ಯೂ ರದ್ದು, ಜ.29 ರ ವರೆಗೆ ಬೆಂಗಳೂರಿನ ಶಾಲೆ ಬಂದ್‌

- Advertisement -

ಬೆಂಗಳೂರು : ರಾಜ್ಯ ಸರಕಾರ ರಾಜ್ಯದಾದ್ಯಂತ ವೀಕೆಂಡ್‌ ಕರ್ಪ್ಯೂವನ್ನು ರದ್ದು ( weekend Curfew canceled ) ಮಾಡಿದ್ದು, ನೈಟ್‌ ಕರ್ಪ್ಯೂ ಮುಂದುವರಿಸಿದೆ. ಅಲ್ಲದೇ ನೈಟ್‌ ಕರ್ಪ್ಯೂ ಅವಧಿಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಸದ್ಯ ಜಾರಿಯಲ್ಲಿರುವ ಎಲ್ಲಾ ರೂಲ್ಸ್‌ಗಳು ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನವರಿ 29 ರ ವರೆಗೆ ಬೆಂಗಳೂರಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಒಂದೊಮ್ಮೆ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳವಾದ್ರೆ ಮತ್ತೆ ಲಾಕ್‌ಡೌನ್‌ ಜಾರಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದೆ. ಜೊತೆಗೆ ಸದ್ಯ ಕರ್ನಾಟಕದಲ್ಲಿ ಜಾರಿಯಲ್ಲಿರುವ ವೀಕೆಂಡ್‌ ಕರ್ಪ್ಯೂ, ನೈಟ್‌ ಕರ್ಪ್ಯೂ ರದ್ದತಿಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್‌ ತಜ್ಞರು, ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ರು. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. ಸಭೆಯ ನಂತರ ಅವರು ಮಾತನಾಡಿದರು. ರಾಜ್ಯದಲ್ಲಿ 50: 50 ರೂಲ್ಸ್‌ ಜಾರಿಯಲ್ಲಿ ಇರಲಿದೆ. ಅಲ್ಲದೇ ನೈಟ್‌ ಕರ್ಪ್ಯೂ ಅವಧಿ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರಲಿದೆ. ಸದ್ಯದ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ತೀರಾ ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಒಂದೊಮ್ಮೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದ್ರೆ ಮತ್ತೆ ವೀಕೆಂಡ್‌ ಕರ್ಪ್ಯೂ ಸೇರಿದಂತೆ ಕಠಿಣ ರೂಲ್ಸ್‌ ಜಾರಿಯಾಗಲಿದೆ. ಹೀಗಾಗಿ ಜನರು ಕೊರೊನಾ ಮಾರ್ಗಸೂಚಿ ಪಾಲನೆಯ ಕಡೆಗೆ ಗಮನಹರಿಸಬೇಕು ಎಂದಿದ್ದಾರೆ.

ಇನ್ನು ಬೆಂಗಳೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಕ್ಕಳಿಗೆ ಕೊರೊನಾ ಪಾಸಿಟಿವಿಟಿ ದರ ಕಡಿಮೆಯಿದೆ. ಅದ್ರಲ್ಲೂ 6 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಲ್ಲಿ ಜನವರಿ ಅಂತ್ಯದ ವರೆಗೆ ಶಾಲೆಗಳನ್ನು ಬಂದ್‌ ಮಾಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಆಯಾಯ ಜಿಲ್ಲಾಧಿಕಾರಿಗಳು ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದರೂ ಕೂಡ ತೀವ್ರತೆ ತೀರಾ ಕಡಿಮೆಯಾಗಿದೆ. ಕೊರೊನಾ ನಿಯಂತ್ರಣಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳೋಣಾ, ಒಂದೊಮ್ಮೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಒಂದೊಮ್ಮೆ ಹೆಚ್ಚಳವಾದ್ರೆ ಆಗ ಬಿಗಿಕ್ರಮವನ್ನು ಕೈಗೊಳ್ಳಬಹುದು ಎಂದು ಸಚಿವರು ಸಲಹೆ ನೀಡಿದ್ದರು. ಅಲ್ಲದೇ ತಜ್ಞರು ಕೂಡ ವೀಕೆಂಡ್‌ ಕರ್ಪ್ಯೂ ರದ್ದು ಮಾಡುವಂತೆ ಸಲಹೆ ಕೊಟ್ಟಿದ್ದಾರೆ. ಆದರೆ ಬಿಬಿಎಂಪಿ ಮಾತ್ರ ಒಂದು ವಾರದ ಮಟ್ಟಿಗಾದರೂ ವೀಕೆಂಡ್‌ ಕರ್ಪ್ಯೂವನ್ನು ಮುಂದುವರಿಸಬೇಕು ಎಂದು ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ಅಂತಿಮವಾಗಿ ರಾಜ್ಯದಾದ್ಯಂತ ಜನರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ವೀಕೆಂಡ್‌ ಕರ್ಪ್ಯೂ ರದ್ದು ಮಾಡುವ ತೀರ್ಮಾನಕ್ಕೆ ಸಹಮತ ಸೂಚಿಸಿದ್ದಾರೆ.

ಇದನ್ನೂ ಓದಿ : Coronavirus : ದೇಶದಲ್ಲಿ ಮತ್ತೆ ಮಹಾಮಾರಿ ಸ್ಫೋಟ: ಒಂದೇ ದಿನದಲ್ಲಿ 3.47 ಲಕ್ಷ ಹೊಸ ಪ್ರಕರಣ ವರದಿ

ಇದನ್ನೂ ಓದಿ : COVID-19 : ಐದು ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್​ ಕಡ್ಡಾಯವಲ್ಲವೆಂದ ಕೇಂದ್ರ ಸರ್ಕಾರ

( Karnataka weekend Curfew canceled New Covid-19 Guidelines Released)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular