ಮಡಿಕೇರಿ: ದೇಶದ ಹಲವು ರಾಜ್ಯಗಳಲ್ಲಿ ಭೂಕುಸಿತ ಪ್ರಕರಣಗಳು ಹೆಚ್ಚುತ್ತಿದೆ. ಪಶ್ಚಿಮಘಟ್ಟವೂ ಸೇರಿದಂತೆ ದೇಶದಲ್ಲಿನ ಗುಡ್ಡ ಪ್ರದೇಶಗಳ ಸಂಪೂರ್ಣ ಅಧ್ಯಯನ ನಡೆಸಿ, ಭೂಕುಸಿತಕ್ಕೆ ಒಳಗಾಗುವ ಪ್ರದೇಶಗಳ ಮ್ಯಾಪಿಂಗ್ (Landslide susceptibility Mapping-LSM) ಕುರಿತಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (Geological survey of India-GSI) ಗೆ ಸರಕಾರ ಹೆಚ್ಚಿನ ಹಣವನ್ನು ಮೀಸಲಿಡಬೇಕು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮನವಿ ಮಾಡಿಕೊಂಡಿದ್ದಾರೆ.

ಶೀಘ್ರವಾಗಿ ಇ ಮ್ಯಾಪಿಂಗ್ ಕಾರ್ಯವನ್ನು ಪೂರ್ಣಗೊಳಿಸಿ, ಭೂಕುಸಿತಕ್ಕೆ ಒಳಗಾಗುವ ಮ್ಯಾಪಿಂಗ್ (LSM) ಮೆಸ್ಕೋ (mesco) (1:10,000) ಸ್ಕೇಲ್ ಮೇಲೆ ನಡೆಯುತ್ತಿರುವ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಇದಕ್ಕಾಗಿ ಹೆಚ್ಚಿನ ಹಣಕಾಸು ನೆರವಿನ ಅಗ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ : ಉಡುಪಿಯಲ್ಲಿ ಪುಷ್ಯ ಮಳೆ ಆರ್ಭಟ : ಅಗಸ್ಟ್ 1ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಜ್ಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಕೊಡಗಿನ ಗಾಳಿಬೀಡು- ವಣಚಲು ಪ್ರದೇಶದ ಮ್ಯಾಪಿಂಗ್ ಸೇರಿದಂತೆ ಒಟ್ಟು 37 ಯೋಜನೆಗಳನ್ನು 2023-2024 ರಲ್ಲಿ ಕೈಗೊಂಡಿದೆ. ಆದರೆ ಈ ಯೋಜನೆಗಳು ವೇಗವಾಗಿ ಗುರಿ ಮುಟ್ಟಬೇಕಾದರೆ ಹಣಕಾಸಿನ ನೆರವು ಅಗತ್ಯವಿದೆ. ಈ ವಿಚಾರವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಭವಿಷ್ಯದ ಸವಾಲುಗಳನ್ನು ಎದುರಿಸಲು ಆಧುನಿಕ ತಂತ್ರಜ್ಞಾನಗಳನ್ನು ನಾವು ಈ ನೆಲೆಯಲ್ಲಿ ಬಳಸಬೇಕಾದ ಅಗತ್ಯವಿದೆ ಎಂದಿದ್ದಾರೆ.
ಇದನ್ನೂ ಓದಿ : Gruha Lakshmi Scheme : ಗೃಹಲಕ್ಷ್ಮೀ ಯೋಜನೆ ಯಜಮಾನಿಯರಿಗೆ ಭರ್ಜರಿ ಗುಡ್ನ್ಯೂಸ್
ಜಪಾನ್, ಇಂಡೋನೇಷ್ಯಾ ದೇಶಗಳು ಮ್ಯಾಪಿಂಗ್ ನಡೆಸುವ ಮೂಲಕ ಸಂಭವಿಸಬಹುದಾಗಿರುವ ಭೂಕಂಪ, ಜ್ವಾಲಾಮುಖಿಗಳಿಂದ ಜನರು ರಕ್ಷಣೆಯನ್ನು ಪಡೆಯುತ್ತಿದ್ದಾರೆ. ಸದ್ಯ ಉತ್ತರ ಕನ್ನಡ ಜಿಲ್ಲೆಯ ಶಿರೂರು, ಕೇರಳ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಮೃತಪಟ್ಟಿದ್ದಾರೆ. ಈ ಹಿಂದೆ ಕೊಡಿನಲ್ಲಿಯೂ ಭೂಕುಸಿತ ಉಂಟಾಗಿತ್ತು.

ಇದನ್ನೂ ಓದಿ : 3 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ನಿಮ್ಮ ಪಡಿತರ ಚೀಟಿ ಚಾಲ್ತಿಯಲ್ಲಿದ್ಯಾ ಚೆಕ್ ಮಾಡಿ
landslides allocate more budget for LSM mapping Madikeri MLA Dr Mantar Gowda appeals