ಲಾಕ್ ಡೌನ್‌ ವೇಳೆ ಪೊಲೀಸರ ದರ್ಪ : ಸರಕಾರಕ್ಕೆ ಖಡಕ್ ವಾರ್ನಿಂಗ್ ಕೊಟ್ಟ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಜಾರಿಯ ವೇಳೆಯಲ್ಲಿ ಪೊಲೀಸರು ಸಂಯಮದಿಂದ ವರ್ತಿಸಬೇಕು. ಅಲ್ಲದೇ ಜನರು ಕೊರೊನಾ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ‌.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಸಲ್ಲಿಕೆ ಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾ.ಅರವಿಂದ ಕುಮಾರ್ ಅವರಿದ್ದ ನ್ಯಾಯ ಪೀಠ ಈ ಸೂಚನೆ ನೀಡಿದೆ‌.

ಲಾಕ್ ಡೌನ್ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗ ಮಾಡುತ್ತಿದ್ದಾರೆಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ‌. ಲಾಕ್’ಡೌನ್ ಸಂದರ್ಭ ದಲ್ಲಿ ಪೊಲೀಸರು ಸಂಯಮದಿಂದ ಇರಬೇಕು. ಜನರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದಿರುವ ನ್ಯಾಯಪೀಠ ವಿಚಾರಣೆಯನ್ನು ಮೇ.13ಕ್ಕೆ ವಿಚಾರಣೆ ಮುಂದೂಡಿದೆ.

https://kannada.newsnext.live/bollywood-tollywood-poojahegde-mangos-gift-mangalore/amp/

Comments are closed.