ಕೇವಲ 500 ರೂ.ಗೆ ಎಲ್‌ಪಿಜಿ ಗ್ಯಾಸ್, ನಾಳೆಯಿಂದಲೇ ಉಚಿತ ವಿದ್ಯುತ್ : ಸರಕಾರದಿಂದ ಹೊಸ ಘೋಷಣೆ

LPG gas for just Rs 500, free electricity : ಕರ್ನಾಟಕದ ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಯ ಸೌಲಭ್ಯವನ್ನು ಜನರು ಪಡೆಯುತ್ತಿದ್ದಾರೆ.

LPG gas for just Rs 500, free electricity : ಕರ್ನಾಟಕದ ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಯ ಸೌಲಭ್ಯವನ್ನು ಜನರು ಪಡೆಯುತ್ತಿದ್ದಾರೆ. ಇದೀಗ ಫೆಬ್ರವರಿ 27 ರಿಂದ ಕೇವಲ 500 ರೂ.ಗೆ ಎಲ್‌ಪಿಜಿ ಗ್ಯಾಸ್, ಉಚಿತ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ.

LPG gas for just Rs 500, free electricity from tomorrow New Congress Guarantee
Image Credit to Original Source

ಅಂದಹಾಗೆ ಈ ಯೋಜನೆ ಜಾರಿ ಆಗ್ತಾ ಇರೋದು ಕರ್ನಾಟಕದಲ್ಲಿ ಅಲ್ಲ, ಬದಲಾಗಿ ನೆರೆಯ ತೆಲಂಗಾಣದಲ್ಲಿ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಕೆಲವೊಂದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಕಾಂಗ್ರೆಸ್‌ ಸರಕಾರ ರಚಿಸಿತ್ತು.

ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಅಧಿಕಾರಕ್ಕೆ ಬಂದಿತು. ಫೆಬ್ರವರಿ 27 ರಿಂದ ಕೇವಲ 500 ರೂ.ಗೆ ಎಲ್‌ಪಿಜಿ ಗ್ಯಾಸ್, ಉಚಿತ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಈ ಕುರಿತು ಘೋಷಣೆ ಮಾಡಿದ್ದು, ನಾಳೆಯಿಂದಲೇ ಹೊಸ ಯೋಜನೆ ಜಾರಿಗೆ ಬರುತ್ತಿದೆ.

ಇದನ್ನೂ ಓದಿ : ಭಕ್ತರನ್ನು ಕಾಯುತ್ತಾಳೆ ಪರಶುರಾಮರ ತಾಯಿ – ಬೇವಿನ ಸೇವೆಯೇ ಈಕೆಗೆ ಅತಿಪ್ರಿಯ

500 ರೂ.ಗೆ ಎಲ್ ಪಿಜಿ ಸಿಲಿಂಡರ್ ಹಾಗೂ ಬಡವರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ನ ಖಾತ್ರಿ ಯೋಜನೆಯಾದ ಈ ಯೋಜನೆಗೆ ಫೆ.27ರಂದು ಚಾಲನೆ ನೀಡುವುದಾಗಿ ಸಿಎಂ ಹೇಳಿದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಮ್ಮುಖದಲ್ಲಿ ಈ ಎರಡು ಯೋಜನೆಗಳನ್ನು ಘೋಷಿಸಲಾಗಿತ್ತು.

LPG gas for just Rs 500, free electricity from tomorrow New Congress Guarantee
Image Credit to Original Source

ಈಗ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದೆ. ಆರು ಚುನಾವಣಾ ಖಾತರಿಗಳ ಪೈಕಿ ಫೆಬ್ರವರಿ 27 ರ ಸಂಜೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪೂರೈಕೆಯನ್ನು ಪ್ರಾರಂಭಿಸಲಿದ್ದೇವೆ ಎಂದು ಸಿಎಂ ರೆಡ್ಡಿ ಹೇಳಿದರು.

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಕಾರ್ಯಕ್ರಮಕ್ಕಾಗಿ ಆಗಮಿಸಲಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಎರಡು ಭರವಸೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಮಹಿಳೆಯರಿಗೆ ಸರ್ಕಾರಿ ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮತ್ತು ಬಡವರಿಗೆ 10 ಲಕ್ಷ ರೂ.ಗಳ ಆರೋಗ್ಯ ಯೋಜನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ : ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮೀ ಯೋಜನೆಯ 6ನೇ ಕಂತಿನ ಹಣ

ತೆಲಂಗಾಣದ ಮುಲುಗು ಜಿಲ್ಲೆಯ ಮೇಡಾರಂನಲ್ಲಿ ನಡೆದ ಬುಡಕಟ್ಟು ಉತ್ಸವದಲ್ಲಿ ದೇವರು ಮತ್ತು ದೇವತೆಗಳಿಗೆ ಪೂಜೆ ಸಲ್ಲಿಸಿದ ನಂತರ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸುದ್ದಿಗಾರರೊಂದಿಗೆ ಹಂಚಿಕೊಂಡಿದ್ದಾರೆ. ಈ ವೇಳೆ, ‘ಸಾಮಕ್ಕ ಸಾರಕ್ಕ ಯಾತ್ರೆ’ಯನ್ನು ರಾಷ್ಟ್ರೀಯ ಹಬ್ಬವಾಗಿ ಗುರುತಿಸಬೇಕೆಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಆರೋಪಿಸಿದ ಸಿಎಂ ರೆಡ್ಡಿ, ಇದು ರಾಜ್ಯದ ‘ತಾರತಮ್ಯ ಮತ್ತು ನಿರ್ಲಕ್ಷ್ಯ’ ಎಂದು ಆರೋಪಿಸಿದರು.

ಇದನ್ನೂ ಓದಿ : ಬಿಪಿಎಲ್‌ ಕಾರ್ಡುದಾರರಿಗೆ 6 ಲಕ್ಷ, ಎಪಿಎಲ್‌ಗೆ 2 ಲಕ್ಷ : ಕೇಂದ್ರ ಸರಕಾರದ ಈ ಯೋಜನೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ

LPG gas for just Rs 500, free electricity from tomorrow: New Congress Guarantee

Comments are closed.