ಸೋಮವಾರ, ಏಪ್ರಿಲ್ 28, 2025
HomeCoastal NewsMangaluru Fire Breaks : ಜಪ್ಪಿನಮೊಗರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ : ಸುಟ್ಟುಕರಕಲಾಯ್ತು ಬಸ್‌

Mangaluru Fire Breaks : ಜಪ್ಪಿನಮೊಗರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ : ಸುಟ್ಟುಕರಕಲಾಯ್ತು ಬಸ್‌

- Advertisement -

ಮಂಗಳೂರು : ಗ್ಯಾರೇಜ್‌ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಗೆಗೆ ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರು ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ಇಂದು ಮುಂಜಾನೆಯ ವೇಳೆಯಲ್ಲಿ ಜೆಪ್ಪಿನಮೊಗರು ಎಂಬಲ್ಲಿರುವ ಗ್ಯಾರೇಜ್ ನಲ್ಲಿ ಒಮ್ಮಿದೊಮ್ಮೆಲೆ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ವ್ಯಾಪಿಸಿದೆ. ಅಲ್ಲದೇ ಅಲ್ಲಿಯೇ ಇದ್ದ ಬಸ್‌ ಸೇರಿದಂತೆ ಇತರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಆದರೆ ಬಸ್‌ ಸೇರಿದಂತೆ ಇತರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

Mangaluru Fire Breaks A bus and several vehicles were gutted

ಘಟನೆಗೆ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ಅಥವಾ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿ ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಆದರೆ ಅಗ್ನಿ ದುರಂತದಿಂದಾಗಿ ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ.

ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಕೋಟಾ: ನೀಟ್ ಆಕಾಂಕ್ಷಿಯೊಬ್ಬರು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಜವಾಹರ್ ನಗರ ಪ್ರದೇಶದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ನಿವಾಸಿಯಾದ ಇಶಾಂಶು ಭಟ್ಟಾಚಾರ್ಯ ( 20 ವರ್ಷ) ಮೃತ ವಿದ್ಯಾರ್ಥಿ.

ಪಶ್ಚಿಮ ಬಂಗಾಳ ಮೂಲದ 20 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಜವಾಹರ್ ನಗರ ಪ್ರದೇಶದಲ್ಲಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಇಶಾಂಶು ಕಳೆದ ವರ್ಷ ಆಗಸ್ಟ್‌ನಲ್ಲಿ ಕೋಟಾಕ್ಕೆ ಬಂದು ವೈದ್ಯಕೀಯ ಪ್ರವೇಶ ಪರೀಕ್ಷೆಯ ನೀಟ್‌ಗೆ ತಯಾರಿ ನಡೆಸುತ್ತಿದ್ದರು. ಮಹಡಿಯಲ್ಲಿ ತನ್ನ ಮೂವರು ಹಾಸ್ಟೆಲ್ ಮೇಟ್‌ಗಳೊಂದಿಗೆ ಕಟ್ಟಡದ ಆರನೇ ಮಹಡಿಯಲ್ಲಿರುವ ಬಾಲ್ಕನಿಯಲ್ಲಿ ಮಾತನಾಡುತ್ತಿದ್ದನು. ಮಧ್ಯರಾತ್ರಿಯ ಸುಮಾರಿಗೆ ಅವರು ತಮ್ಮ ಕೋಣೆಗೆ ಹಿಂತಿರುಗುತ್ತಿದ್ದಾಗ ಸಮತೋಲನ ಕಳೆದುಕೊಂಡು ಬಿದ್ದಿದ್ದು, ಬಾಲ್ಕನಿಯ ಅಲ್ಯೂಮಿನಿಯಂ ರೇಲಿಂಗ್‌ ಗೆ ಸಿಕ್ಕಿಬಿದ್ದಿದ್ದಾರೆ. ನಂತರ ಅವರ ತೂಕದ ಭಾರಕ್ಕೆ ಅಲ್ಯೂಮಿನಿಯಂ ರೇಲಿಂಗ್‌ ಮುರಿದು ಕಟ್ಟಡದಿಂದ ಕೆಳಗೆ ಬಿದ್ದಿದ್ದಾರೆ. ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

“ಇಶಾಂಶು ಭಟ್ಟಾಚಾರ್ಯ ಅವರು ಸಮತೋಲನ ಕಳೆದುಕೊಂಡು ಬಾಲ್ಕನಿಯ ಅಲ್ಯೂಮಿನಿಯಂ ರೇಲಿಂಗ್‌ಗೆ ಮೇಲೆ ಬಿದ್ದು, ಅವರ ತೂಕದ ಬಾರಕ್ಕೆ ಅಲ್ಯೂಮಿನಿಯಂ ರೇಲಿಂಗ್‌ ಮುರಿದು ಬಿದ್ದಿರುವ ಶಂಕೆ ಇದೆ ” ಎಂದು ಸರ್ಕಲ್ ಆಫೀಸರ್ ಅಮರ್ ಸಿಂಗ್ ತಿಳಿಸಿದ್ದಾರೆ. ಅವರು ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಅವನು ತನ್ನ ಮೂವರು ಹಾಸ್ಟೆಲ್ ಮೇಟ್‌ಗಳೊಂದಿಗೆ ಕಟ್ಟಡದ ಆರನೇ ಮಹಡಿಯಲ್ಲಿರುವ ಬಾಲ್ಕನಿಯಲ್ಲಿ ಮಾತನಾಡುತ್ತಿದ್ದನು. ಮಧ್ಯರಾತ್ರಿಯ ಸುಮಾರಿಗೆ ಅವರು ತಮ್ಮ ಕೋಣೆಗೆ ಹಿಂತಿರುಗುತ್ತಿದ್ದಾಗ, ಅವರು ಸಮತೋಲನ ಕಳೆದುಕೊಂಡು ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಸಂತ್ರಸ್ತೆಯ ಮೃತದೇಹವನ್ನು ಎಂಬಿಎಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವರ ಕುಟುಂಬ ಸದಸ್ಯರು ಬಂದ ನಂತರ ನಡೆಸಲಾಗುವುದು” ಎಂದು ಅಧಿಕಾರಿಗಳು ಹೇಳಿದರು.

ಜನವರಿ 29 ರಂದು ಇದೇ ರೀತಿಯ ಘಟನೆಯಲ್ಲಿ, ಕೋಟಾದಲ್ಲಿ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮಹಾರಾಷ್ಟ್ರದ 17 ವರ್ಷದ ಜೆಇಇ ಮೇನ್ಸ್ ಆಕಾಂಕ್ಷಿಯೊಬ್ಬರು ತಮ್ಮ ಹಾಸ್ಟೆಲ್ ಕಟ್ಟಡದ ಮೊದಲ ಮಹಡಿಯ ಬಾಲ್ಕನಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Mangaluru Fire Breaks in Garage A bus and several vehicles were gutted

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular