Exclusive : ಮೂಡಬಿದಿರೆಗೆ ಮಿಥುನ್ ರೈ, ಬಂಟ್ವಾಳಕ್ಕೆ ಪದ್ಮರಾಜ್ ಫಿಕ್ಸ್

ಮಂಗಳೂರು : ಕಾಂಗ್ರೆಸ್ ಪಕ್ಷ ಈ ಬಾರಿ ಕರಾವಳಿ ಭಾಗದಲ್ಲಿ ಪ್ರಾಬಲ್ಯ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಟಿಕೆಟ್ ಬಹುತೇಕ (MLA Election 2023 Congress Ticket) ಖಚಿತ ಮಾಡಿದೆ. ಪಕ್ಷದ ಹಿರಿಯ ಮುಖಂಡರ ನೇತೃತ್ವದಲ್ಲಿ ಹೊಸಮುಖಗಳನ್ನು ಕಣಕ್ಕೆ ಇಳಿಸಲು ಫ್ಲ್ಯಾನ್ ಮುಂದಾಗಿದೆ. ಇದೀಗ ಮೂಡಬಿದ್ರೆ ಹಾಗೂ ಬಂಟ್ವಾಳ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಈ ಕುರಿತು ಹೈಕಮಾಂಡ್ ಮೂಲದಿಂದ ಮಹತ್ವದ ಸುದ್ದಿ ಹೊರಬಿದ್ದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆ ರೋಚಕ ಘಟ್ಟ ತಲುಪಿದೆ. ಈ ಬಾರಿ ಉಳ್ಳಾಲ ಕ್ಷೇತ್ರವನ್ನು ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಲ್ಲಿಯೂ ಹೊಸ ಅಭ್ಯರ್ಥಿ ಗಳನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಸಿದ್ದತೆ ನಡೆಸಿದೆ. ಇದೀಗ ಬಾರೀ ಪೈಪೋಟಿ ಏರ್ಪಟ್ಟಿದ್ದ ಮೂಡಬಿದ್ರೆ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಗಳನ್ನು ಅಂತಿಮಗೊಳಿಸಿದೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರದಿಂದ ಬಂಟ ಸಮುದಾಯದ ಯುವ ಮುಖಂಡ ಮಿಥುನ್ ರೈ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಬಹುತೇಕ ಫಿಕ್ಸ್ ಮಾಡಿದೆ.

ಇನ್ನೊಂದೆಡೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಬಿಲ್ಲವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಸಜ್ಜಾಗಿದೆ. ಬಂಟ್ವಾಳ ಕ್ಷೇತ್ರದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬದಲು ಪದ್ಮರಾಜ್ ಆರ್. ಕಣಕ್ಕೆ ಇಳಿಯುವುದು ಬಹುತೇಕ ಫಿಕ್ಸ್ ಆಗಿದೆ ಅನ್ನೋದು ಕಾಂಗ್ರೆಸ್ ಹೈಕಮಾಂಡ್ ಮೂಲಗಳಿಂದ ತಿಳಿದು ಬಂದಿದೆ. ಕಾಂಗ್ರೆಸ್ ಹೆಣೆದಿರುವ ಹೊಸ ಸೂತ್ರದ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಬಂಟ, 2 ಬಿಲ್ಲವ, 2 ಮುಸ್ಲೀಂ, 1 ಕ್ರಿಶ್ವಿಯನ್ ಹಾಗೂ ಒಂದು ಕ್ಷೇತ್ರವನ್ನು ಮೀಸಲು ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಉಳ್ಳಾಲ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಹೊರತುಪಡಿಸಿ, ಉಳಿದೆಲ್ಲಾ ಕ್ಷೇತ್ರಗಳಿಗೆ ಈ ಬಾರಿ ಹೊಸ ಅಭ್ಯರ್ಥಿಗಳು ಕಣಕ್ಕೆ ಇಳಿಯುವುದು ಬಹುತೇಕ ಖಚಿತ. ಸತತ ಸೋಲಿನ ಸುಳಿಗೆ ಸಿಲುಕಿರುವ ಕಾಂಗ್ರೆಸ್ ಹೊಸ ಸೂತ್ರ ಮುಂದಿನ ಚುನಾವಣೆಯಲ್ಲಿ ವರ್ಕೌಟ್ ಆಗುತ್ತಾ ಅನ್ನೋದನ್ನು ಕಾದುನೋಡಬೇಕಾಗಿದೆ.

ಇದನ್ನೂ ಓದಿ : ಪುತ್ತೂರು, ಬಂಟ್ವಾಳ ಸೇರಿ ಈ ಬಾರಿ ಹೊಸ ಮುಖಗಳಿಗೆ ಟಿಕೆಟ್: ಗೌಪ್ಯವಾಗಿ ಹಿರಿಯರಿಗೆ ಖಡಕ್ ಸಂದೇಶ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

ಇದನ್ನೂ ಓದಿ : MLA Election 2023 Kodagu : ವಿರಾಜಪೇಟೆಗೆ ಪೊನ್ನಣ್ಣ ಮಡಿಕೇರಿಗೆ ಡಾ. ಮಂತರ್ ಗೌಡ ಫಿಕ್ಸ್ : ಕೊಡಗಿನಲ್ಲಿ ಕಾಂಗ್ರೆಸ್ ನಿಂದ ಹೊಸಮುಖ

Mithun Rai for Moodabidari Padmaraj Fix for Bantwala MLA Election 2023 Congress Ticket

Comments are closed.