ಮೈಸೂರು ಸಾಮೂಹಿಕ ಅತ್ಯಾಚಾರ : ಆರೋಪಿಗಳ ಸುಳಿವು ಪತ್ತೆ ಹಚ್ಚಿದ ಪೊಲೀಸರು !

ಮೈಸೂರು : ಚಾಮುಂಡಿ ತಪ್ಪಲಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ಚುರುಕಾಗಿದೆ. ಪ್ರಕರಣದ ಆರೋಪಿಗಳ ಸುಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಲ್ಲದೇ ನಗರದ ಕಾಲೇಜಿನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದು ಅನುಮಾನ ಹುಟ್ಟಿಸಿದೆ.

ಅಗಸ್ಟ್‌ 24ರಂದು ಸಂಜೆ 7.30ರ ಸುಮಾರಿಗೆ ಲಲಿತಾದ್ರಿಪುರದಲ್ಲಿ ಸ್ನೇಹಿತನ ಜೊತೆಗೆ ವಿಹಾರಕ್ಕೆ ತೆರಳಿದ್ದ ವಿದ್ಯಾರ್ಥಿನಿಯ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ಪ್ರಕರಣ ದೇಶದಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಪ್ರಕರಣದ ತನಿಖೆಗೆ ಇಳಿದ ಪೊಲೀಸರು ಹಲವರನ್ನು ಕರೆಯಿಸಿ ವಿಚಾರಣೆಯನ್ನು ನಡೆಸಿದ್ದಾರೆ. ಇದೀಗ ನಗರ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ಪದವಿ ಪಡೆಯುತ್ತಿರುವ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದು ಅನುಮಾನ ಹುಟ್ಟುಹಾಕಿದೆ.

ಮೂವರು ತಮಿಳುನಾಡು ಹಾಗೂ ಓರ್ವ ಕೇರಳ ಮೂಲದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಘಟನೆ ನಡೆದ ಬೆನ್ನಲ್ಲೇ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇನ್ನೊಂದೆಡೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಪರೀಕ್ಷೆಗೂ ಕೂಡ ಗೈರುಹಾಜರಾಗಿದ್ದಾರೆ. ಹೀಗಾಗಿ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದಲ್ಲಿ ಇದೇ ವಿದ್ಯಾರ್ಥಿಗಳು ಬಾಗಿಯಾಗಿದ್ದಾರಾ ಅನ್ನೋ ಅನುಮಾನ ವ್ಯಕ್ತವಾಗಿದೆ.

ನಾಲ್ವರು ಕೂಡ ಕೇರಳದಲ್ಲಿ ತಲೆ ಮರೆಯಿಸಿಕೊಂಡಿದ್ದಾರೆ ಎನ್ನುವ ಅನುಮಾನದ ಹಿನ್ನೆಲೆಯಲ್ಲಿ ಪೊಲೀಸರ ತಂಡ ಇದೀಗ ಕೇರಳಕ್ಕೆ ತೆರಳಿದೆ. ಇನ್ನೊಂದೆಡೆ ತಮಿಳುನಾಡು, ಮೈಸೂರು ಹಾಗೂ ಬೆಂಗಳೂರಿನಲ್ಲಿಯೂ ಆರೋಪಿಗಳಿಗಾಗು ಶೋಧಕಾರ್ಯ ಮುಂದುವರಿದಿದೆ. ಈಗಾಗಲೇ ಸಂತ್ರಸ್ತೆಯ ಸ್ನೇಹಿತ ಕೂಡ ಪೊಲೀಸರಿಗೆ ಘಟನೆಯ ಕುರಿತು ಹೇಳಿಕೆಯನ್ನು ನೀಡಿದ್ದಾನೆ. ಇದೀಗ ಘಟನೆಯ ಬೆನ್ನಲ್ಲೇ ವಿದ್ಯಾರ್ಥಿಗಳು ನಾಪತ್ತೆಯಾಗಿರೋದು ಅನುಮಾನವನ್ನು ಹುಟ್ಟುಹಾಕಿದೆ.

ಇದನ್ನೂ ಓದಿ : ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ : ಪೊಲೀಸರ ಮುಂದೆ ಸಂತ್ರಸ್ತೆಯ ಸ್ನೇಹಿತನ ಹೇಳಿದ್ದೇನು ಗೊತ್ತಾ ?

ಮೈಸೂರು ಗ್ಯಾಂಗ್‌ರೇಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ಆರೋಪಿಗಳ ಹುಡುಕಾಟ ನಡೆಯುತ್ತಿದೆ. ಪೊಲೀಸರು ಎಲ್ಲಾ ಆಂಗಲ್‌ನಲ್ಲಿಯೂ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮೊಬೈಲ್‌ ಟವರ್‌ ಲೋಕೇಶನ್‌ ಆಧಾರದಲ್ಲಿಯೂ ತನಿಖೆ ನಡೆಯುತ್ತಿದೆ. ಅಲ್ಲದ ಹಿರಿಯ ಪೊಲೀಸ್‌ ಅಧಿಕಾರಿಗಳು ಮೈಸೂರಿನಲ್ಲಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ : ಮಾವನ ಜೊತೆ ಪ್ರೀತಿಗೆ ಬಿದ್ದು ಓಡಿ ಹೋದ ಸೊಸೆ : 2 ವರ್ಷದ ನಂತರ ಮನೆಗೆ ಬಂದ ಜೋಡಿ, ಮಗ ಮಾಡಿದ್ದೇನು ಗೊತ್ತಾ!

https://kannada.newsnext.live/sandalwood-deepikadas-bigboos-seson-7-hot-photoshoot/

Comments are closed.