ಮಂಗಳವಾರ, ಏಪ್ರಿಲ್ 29, 2025
Homekarnatakapraveen nettaru murder : ಬಿಜೆಪಿ ಯುವ ಮುಖಂಡನ ಹತ್ಯೆ ಪ್ರಕರಣ : ಶೀಘ್ರದಲ್ಲೇ ...

praveen nettaru murder : ಬಿಜೆಪಿ ಯುವ ಮುಖಂಡನ ಹತ್ಯೆ ಪ್ರಕರಣ : ಶೀಘ್ರದಲ್ಲೇ ಹಂತಕರ ಪತ್ತೆಯೆಂದ ಗೃಹ ಸಚಿವ

- Advertisement -

ಬೆಂಗಳೂರು : ಕರಾವಳಿ ಜಿಲ್ಲೆಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ಬಿಜೆಪಿ ಯುವ ಮೋರ್ಛಾದ ಜಿಲ್ಲಾ ಮುಖಂಡ ಪ್ರವೀಣ್​ ನೆಟ್ಟಾರು ದುಷ್ಕರ್ಮಿಗಳ ಮಾರಕ ದಾಳಿಗೆ ಬಲಿಯಾಗಿದ್ದಾರೆ. ಪ್ರವೀಣ್​ ನೆಟ್ಟಾರು ಸಾವಿನ ಸುದ್ದಿ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆಯೇ ದಕ್ಷಿಣ ಕನ್ನಡದ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸುಳ್ಯ, ಕಡಬ ಹಾಗೂ ಬೆಳ್ಳಾರೆಯ ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.

ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಸಾವಿನ ಪ್ರಕರಣದ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರವೀಣ್​ ನೆಟ್ಟಾರು ಸಾವು ಪ್ರಕರಣ ನಿಜಕ್ಕೂ ದುರದೃಷ್ಟಕರ. ರಾಜ್ಯ ಪೊಲೀಸ್​ ಇಲಾಖೆ ಈ ಪ್ರಕರಣದಲ್ಲಿ ಈಗಾಗಲೇ ಅಲರ್ಟ್​ ಆಗಿದ್ದು ಹಂತಕರು ಯಾರೇ ಆಗಿದ್ದರೂ ಸಹ ಶೀಘ್ರದಲ್ಲಿಯೇ ಅವರನ್ನು ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಭರವಸೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿ ನಿನ್ನೆ ರಾತ್ರಿ ಪ್ರವೀಣ್​ ನೆಟ್ಟಾರು ತಮ್ಮ ಅಂಗಡಿಯನ್ನು ಬಂದ್​ ಮಾಡಿ ಮನೆಗೆ ತೆರಳಲು ಮುಂದಾಗುತ್ತಿದ್ದಂತೆಯೇ ಬಂದ ದುಷ್ಕರ್ಮಿಗಳು ಪ್ರವೀಣ್​ರನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್​ ಆಗಿದ್ದಾರೆ. ಪ್ರವೀಣ್​ರ ಮೃತದೇಹವನ್ನು ಕೂಡಲೇ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರವೀಣ್​ ನೆಟ್ಟಾರು ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ . ಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಬೆಳ್ಳಾರೆ ಮೂಲದ ಐವರನ್ನು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : Praveen Nettaru murder case : ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಸೆಕ್ಷನ್‌ ಜಾರಿ, ಹುಟ್ಟೂರಲ್ಲಿ ಅಂತ್ಯಕ್ರೀಯೆ

ಇದನ್ನೂ ಓದಿ : Praveen Nettar Murder : ಪ್ರವೀಣ್‌ ಹತ್ಯೆ : ಸಿಎಂ ಬೊಮ್ಮಾಯಿ, ನಳಿನ್‌ ವಿರುದ್ದ ಹಿಂದೂ ಕಾರ್ಯಕರ್ತರ ಆಕ್ರೋಶ

praveen nettaru murder home minister araga jnanendra respond

RELATED ARTICLES

Most Popular