ಶುಕ್ರವಾರ, ಜೂನ್ 6, 2025
HomeSportsCricketRCB IPL 2025 ಗೆಲುವಿನ ಸಂಭ್ರಮದಲ್ಲಿ ಸೂತಕ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ 11 ಬಲಿ

RCB IPL 2025 ಗೆಲುವಿನ ಸಂಭ್ರಮದಲ್ಲಿ ಸೂತಕ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ 11 ಬಲಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2025 ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ ತಂಡ ಪಂಜಾಬ್‌ ಕಿಂಗ್ಸ್‌ ತಂಡವನ್ನು 6ರನ್‌ ಗಳಿಂದ ಸೊಲಿಸಿತ್ತು. ಇಂದು ಬೆಂಗಳೂರಿಗೆ ಆಗಮಿಸಿದ ಆರ್‌ಸಿಬಿ ತಂಡಕ್ಕೆ ಅದ್ದೂರಿ ಸ್ವಾಗತ ನೀಡಲಾಯಿತು.

- Advertisement -

RCB IPL 2025 Celebration : ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL ) ಚಾಂಪಿಯನ್‌ ಆಗಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ತಂಡ ಗೆಲುವಿನ ಸಂಭ್ರಮ ಆಚರಿಸುತ್ತಿದೆ. ಆದರೆ ಗೆಲುವಿನ ಸಂಭ್ರಮಕ್ಕೆ ಸೂತಕದ ಛಾಯೆ ಆವರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಸಂಭ್ರಮಾಚರಣೆಯ ವೇಳೆಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ವರೆಗೆ ಓಪನ್‌ ಬಸ್‌ನಲ್ಲಿ ವಿಜಯೋತ್ಸವ ಆಚರಿಸಲಾಯಿತು. ತಮ್ಮ ನೆಚ್ಚಿನ ಆರ್‌ಸಿಬಿ ತಂಡದ ಆಟಗಾರರನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ಜಮಾಯಿಸಿದ್ದರು. ಈ ವೇಳೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಒಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, 6ಕ್ಕೂ ಅಧಿಕ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಉಳಿದಂತೆ ಅಸ್ವಸ್ಥಗೊಂಡವರನ್ನು ಲೇಡಿ ಕರ್ಜನ್‌ ಆಸ್ಪತ್ರೆ, ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : Virat Kohli : ಟೀಂ ಇಂಡಿಯಾಕ್ಕೆ ಭರ್ಜರಿ ಗುಡ್‌ನ್ಯೂಸ್‌ ಕೊಟ್ಟ ವಿರಾಟ್‌ ಕೊಹ್ಲಿ

ಇದೇ ಮೊದಲ ಬಾರಿಗೆ ಐಪಿಎಲ್‌ ಟ್ರೋಫಿ ಜಯಿಸಿರುವ ಆರ್‌ಸಿಬಿ ತಂಡದ ಜೊತೆಗೆ ಸಂಭ್ರಮಾಚರಣೆಯನ್ನು ಆಚರಿಸಲು, ಅಭಿಮಾನಿಗಳು ಮುಂಜಾನೆಯಿಂದಲೇ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಜಮಾಯಿಸಿದ್ದರು. ಸ್ಟೇಡಿಯಂನ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಇದರಿಂದಾಗಿ ಮೆಟ್ರೋ ಹಾಗೂ ಪಾದಚಾರಿ ಮಾರ್ಗದಲ್ಲಿ ಹೆಚ್ಚಿನ ಜನಸಂದಣಿ ಉಂಟಾಗಿತ್ತು.

RCB IPL 2025 Celebration : ವಿಧಾನಸೌದದಲ್ಲಿ ಆರ್‌ಸಿಬಿ ತಂಡಕ್ಕೆ ಅಭಿನಂದನೆ

ಐಪಿಎಲ್‌ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಟ್ರೋಪಿ ಜಯಿಸಿರುವ ಆರ್‌ಸಿಬಿ ತಂಡಕ್ಕೆ ಕರ್ನಾಟಕದಲ್ಲಿ ಅದ್ದೂರಿ ಸ್ವಾಗತ ದೊರೆತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2025 ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ ತಂಡ ಪಂಜಾಬ್‌ ಕಿಂಗ್ಸ್‌ ತಂಡವನ್ನು 6ರನ್‌ ಗಳಿಂದ ಸೊಲಿಸಿತ್ತು. ಇಂದು ಬೆಂಗಳೂರಿಗೆ ಆಗಮಿಸಿದ ಆರ್‌ಸಿಬಿ ತಂಡಕ್ಕೆ ಅದ್ದೂರಿ ಸ್ವಾಗತ ನೀಡಲಾಯಿತು.

ಇದನ್ನೂ ಓದಿ : ಈ ಸಲ ಕಪ್ ನಮ್ದು: ವಿರಾಟ್ ಕೊಹ್ಲಿಯ 18 ವರ್ಷಗಳ ವನವಾಸ ಅಂತ್ಯ, RCB ಐಪಿಎಲ್ 2025 ಚಾಂಪಿಯನ್

ಕರ್ನಾಟಕ ಸರಕಾರ ಆರ್‌ಸಿಬಿ ತಂಡವನ್ನು ಅಭಿನಂದಿಸಿದ್ದು, ವಿಧಾನಸೌದದ ಮೆಟ್ಟಿಲ ಮೇಲೆ ಅಭಿನಂದನಾ ಕಾರ್ಯವನ್ನು ಆಯೋಜಿಸಲಾಗಿದೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ವಿರಾಟ್‌ ಕೊಹ್ಲಿ ಹಾಗೂ ಆರ್‌ಸಿಬಿ ತಂಡವನ್ನು ಅಭಿನಂದಿಸಿದ್ದಾರೆ.

RCB Wins IPL 2025 Celebration in Vidhana Soudha, Bengaluru 11 Death Kannada News

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular