Red alert in Karnataka : ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದಾದ್ಯಂತ ಇನ್ನೂ ಎರಡು ದಿನಗಳ (ಮೇ 21 ಮತ್ತು 22 ರಂದು) ಕಾಲ ಬಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮೇ 22 ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ನದಿಗಳು ಅಥವಾ ಸಮುದ್ರ ತೀರಗಳ ಬಳಿ ತೆರಳದಂತೆ ನೋಡಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.
Also Read : ಬೇಸಿಗೆ ರಜೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್
ಅರಬ್ಬಿ ಸಮುದ್ರದಲ್ಲಿ ಅಲೆಗಳ ಮಟ್ಟ ಏರಿಕೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಮತ್ತು ಈಗಾಗಲೇ ಸಮುದ್ರಕ್ಕೆ ಹೋಗಿರುವವರು ತಕ್ಷಣ ದಡಕ್ಕೆ ಮರಳುವಂತೆ ತಿಳಿಸಲಾಗಿದೆ. ಈ ಅವಧಿಯಲ್ಲಿ ನದಿ ದಂಡೆಗಳು ಅಥವಾ ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಪ್ರತಿ ತಾಲ್ಲೂಕಿನಲ್ಲಿ ಜಾಗೃತ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ಸಿದ್ಧತೆಯನ್ನು ಕಾಯ್ದುಕೊಳ್ಳಲು ಎಲ್ಲಾ ಸಂಬಂಧಿತ ಇಲಾಖೆಗಳಿಗೆ ಸೂಚಿಸಲಾಗಿದೆ. ಉಡುಪಿ ನಗರ ಸೇರಿದಂತೆ ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗಿದೆ. ಮೇ 20 ರಂದು ಭಾರೀ ಮಳೆಯಾಗುವ ಸಾಧ್ಯತೆಯ ಕಾರಣ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ.
ಮೇ 19 ರ ಸೋಮವಾರ ಬೆಳಿಗ್ಗೆ ಮಲ್ಪೆ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಮೇ 20ರಂದು ಸುರಿದ ಮಳೆಯಿಂದಾಗಿ ಉಡುಪಿ ನಗರ ಮಣಿಪಾಲದಲ್ಲಿ ಬಾರೀ ಅನಾಹುತ ಸಂಭವಿಸಿದ್ದು, ರಸ್ತೆಯಲ್ಲಿ ಕುಸಿತ ಉಂಟಾಗಿದೆ. ಅಲ್ಲದೇ ಉಡುಪಿ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನು ಉಡುಪಿಯಿಂದ ಬನ್ನಂಜೆವರೆಗೆ ಬಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಉಡುಪಿ ಜಿಲ್ಲಾಡಳಿತ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಕರಾವಳಿ ಪ್ರದೇಶಗಳಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ. ಸಮುದ್ರಕ್ಕೆ ಇಳಿಯುವ ಮೀನುಗಾರರು ತೀವ್ರ ಎಚ್ಚರಿಕೆ ವಹಿಸುವಂತೆ ಐಎಂಡಿ ಸೂಚಿಸಿದೆ. ಉಡುಪಿಗೆ ಈ ನಿರ್ದೇಶನವನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪ ಆಯುಕ್ತೆ ಮತ್ತು ಅಧ್ಯಕ್ಷೆ ಡಾ. ಕೆ. ವಿದ್ಯಾ ಕುಮಾರಿ ಹೊರಡಿಸಿದ್ದಾರೆ.
Also Read : Drone attack : ಉಡುಪಿ : ಪಾದೂರು ತೈಲ ಸಂಗ್ರಹಾಲಯದ ಮೇಲೆ ಡ್ರೋನ್ ದಾಳಿ
Red alert in Karnataka for 2 more days Heavy rain in these districts in Kannada News