Kalladka Prabhakar Bhat : ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಮಂಗಳೂರು : ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ (Kalladka Prabhakar Bhat ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲ್ಲಡ್ಕದಲ್ಲಿರುವ ತಮ್ಮ ಮನೆಯಲ್ಲಿಇದ್ದಾಗ ಎದೆನೋವು ಕಾಣಿಸಿಕೊಂಡಿತ್ತು, ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ಪ್ರಭಾಕರ ಭಟ್‌ ಅವರಿಗೆ ಕಡಿಮೆ ರಕ್ತದೊತ್ತಡದ ಕಾರಣದಿಂದ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅಲ್ಲದೇ ಸಣ್ಣ ಪ್ರಮಾಣದ ಎದೆನೋವಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಚಿಕಿತ್ಸೆಯನ್ನು ನೀಡಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ್ ಭಟ್ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಇದೇ ವೇಳೆಯಲ್ಲಿ ವಿಶ್ವವಿದ್ಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗೋಬ್ಯಾಕ್ ಎಂದು ಪ್ರತಿಭಟನೆ ನಡೆಸಲಾಗಿತ್ತು. ಮಂಗಳೂರಿನಲ್ಲಿ ಸಿಎಫ್‌ಐ ವಿದ್ಯಾರ್ಥಿ ಸಂಘಟನೆಯಿಂದ ಧರಣಿ ನಡೆಸಲಾಗಿತ್ತು. ಬುರ್ಖಾ ಧರಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗಿಯಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಪೊಲೀಸರನ್ನು ತಳ್ಳಿಕೊಂಡು ಹೋಗಲು ವಿದ್ಯಾರ್ಥಿಗಳು ಯತ್ನಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ : ಬಿ.ಜೆ.ಪುಟ್ಟಸ್ವಾಮಿ ಇನ್ನೂ ಗಾಣಿಗರ ಮಹಾಸ್ವಾಮಿ : ಇಳಿವಯಸ್ಸಿನಲ್ಲಿ ಸನ್ಯಾಸದ ಮೊರೆ ಹೋದ ಮಾಜಿ ಸಚಿವ

ಇದನ್ನೂ ಓದಿ : ಈ ಬಾರಿಯೂ ನಿಜವಾಗುತ್ತಾ ಕೋಡಿ ಶ್ರೀ ಭವಿಷ್ಯ

RSS Leader Kalladka Prabhakar Bhat admitted to Hospital in Mangaluru

Comments are closed.