ಸೋಮವಾರ, ಏಪ್ರಿಲ್ 28, 2025
Homekarnatakaಎಸ್.ಎಲ್.ಭೈರಪ್ಪಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ

ಎಸ್.ಎಲ್.ಭೈರಪ್ಪಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ

- Advertisement -

ಮೈಸೂರು : ಖ್ಯಾತ ಸಾಹಿತಿ ನಾಡೋಜ ಡಾ.ಎಸ್.ಎಲ್ ಭೈರಪ್ಪ ಅವರಿಗೆ ಈ ಬಾರಿಯ‌ ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಇದೇ ಮೊದಲ ಬಾರಿಗೆ ಕಡಲತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತ ಅವರ ಜನ್ಮದಿನ ದಂದು ಕೋಟತಟ್ಟು ಗ್ರಾ.ಪಂ. ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ನೀಡುತ್ತಿರುವ ಪ್ರತಿಷ್ಠಿತ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಪ್ರಶಸ್ತಿ ಪುರಸ್ಕೃತರ ಊರಿನಲ್ಲಿಯೇ ಪ್ರಧಾನಿಸಲಾಯಿತು.

2020ನೇ ಸಾಲಿನ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮೈಸೂರಿನ ಪ್ರಮತಿ ಸ್ಕೂಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿಸಿ ಗೌರವಿಸಲಾಯಿತು. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯ ರೂವಾರಿ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶಸ್ತಿ ಪ್ರಧಾನಿಸಿದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಚಾಮರಾಜ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ, ಮೈಸೂರು ಸಂಸದ ಪ್ರತಾಪಸಿಂಹ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕೋಟ ಕಾರಂತ ಪ್ರತಿಷ್ಠಾನದ ಯು.ಎಸ್. ಶೆಣೈ, ಸುಬ್ರಾಯ ಆಚಾರ್ಯ ಕೋಟತಟ್ಟು ಪಂಚಾಯತ್ ಆಡಳಿತಾಧಿಕಾರಿ ಡಾ. ಅರುಣ್ ಕುಮಾರ್ ಉಪಸ್ಥಿತರಿದ್ದರು.

ಕಳೆದ 15ವರ್ಷಗಳಿಂದ ಪ್ರತೀ ವರ್ಷ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಕಾರಂತರ ಹುಟ್ಟೂರು ಕೋಟದಲ್ಲಿಯೇ ಗಣ್ಯರಿಗೆ ಪ್ರದಾನಿಸಲಾಗುತ್ತಿದೆ. ಆದರೆ ಈ ಬಾರಿ ಕೋವಿಡ್-19 ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಈ ಮಹತ್ವದ ಬದಲಾವಣೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರ ಊರಿಗೆ ತೆರಳಿ ಅಲ್ಲಿ ಸರಳ ಕಾರ್ಯಕ್ರಮ ನಡೆಸಿ, ರಜತ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular