ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇಗುಲದ ಜಾತ್ರಾ ದಿನಾಂಕ ಪ್ರಕಟ

ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ಹಾಗೂ ಕರ್ನಾಟಕದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾದ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ದ್ವೈವಾರ್ಷಿಕ ಜಾತ್ರಾ ಮಹೋತ್ಸವದ ದಿನಾಂಕಗಳನ್ನು ಅಧಿಕೃತವಾಗಿ ಘೋಷಿಸಲಾಗಿದೆ. ದೇವಸ್ಥಾನದ ಸಭಾ ಮಂಟಪದಲ್ಲಿ ನಡೆದ ಬಾಬುದಾರರು ಹಾಗೂ ಸಾರ್ವಜನಿಕರ ಸಭೆಯಲ್ಲಿ ಅರ್ಚಕ ಶರಣ ಆಚಾರ್ಯ, ಕೆರೆಕೈ ರಾಮಚಂದ್ರ ಭಟ್ಟ ಅವರು ಜಾತ್ರೆಯ ಮುಹೂರ್ತವನ್ನು ಪ್ರಕಟಿಸಿದರು.

2026ರ ಜಾತ್ರಾ ಮಹೋತ್ಸವದ ಪ್ರಮುಖ ವಿಧಿವಿಧಾನಗಳು ಈ ಕೆಳಗಿನಂತಿವೆ:

ಸಭೆಯ ಮುಖ್ಯಾಂಶಗಳು:

ದೇವಸ್ಥಾನದ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ರವೀಂದ್ರ ಜಿ. ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಯಿತು. ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆಯಿರುವುದರಿಂದ ಭದ್ರತೆ ಮತ್ತು ಮೂಲಸೌಕರ್ಯಗಳ ಕುರಿತು ಚರ್ಚೆ ನಡೆಸಲಾಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ವಿವಿಧ ‘ಹೊರಬೀಡು’ ಸೇವೆಗಳ ದಿನಾಂಕಗಳನ್ನೂ ಸಹ ಈ ಸಂದರ್ಭದಲ್ಲಿ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಭಾರತಕ್ಕೆ ಹೀಗೆ ಬಂದು ಹಾಗೆ ಹೋದ ಮೆಸ್ಸಿ ಗಳಿಸಿದ್ದು 89 ಕೋಟಿ!

ಭಕ್ತರಿಗೆ ವಿಶೇಷ ಸೂಚನೆ
2026ರ ಫೆಬ್ರವರಿಯಲ್ಲಿ ನಡೆಯುವ ಈ ಜಾತ್ರೆಯು ಉತ್ತರ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಲಿದ್ದು, ಭಕ್ತರು ಈ ಅಧಿಕೃತ ದಿನಾಂಕಗಳನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಬಹುದಾಗಿದೆ.

Exit mobile version